ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.

ರಾಜಸ್ಥಾನ ಮೂಲದ ಉದ್ಯಮಿ ಅರವಿಂದ್ ಭಾರದ್ವಾಜ್ ಮತ್ತು ಜ್ಯೋತಿ ಕಾರಿನಲ್ಲಿ ಮಾತನಾಡುತ್ತಿದ್ದ ವೇಳೆ ಸ್ಥಳೀಯರ ಗುಂಪು ಪ್ರಶ್ನಿಸಿದ್ದು, ಬಳಿಕ ಇಬ್ಬರೂ ತಮ್ಮ ಕಂಪನಿಯತ್ತ ತೆರಳಿದ್ದಾರೆ. ಈ ವೇಳೆ ಕಾರು ಸ್ಥಳೀಯರ ಬೈಕ್‌ಗೆ ಸ್ಪರ್ಶಿಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ.

ಆ ಬಳಿಕ ಸ್ಥಳೀಯರ ಗುಂಪು ಕಂಪನಿವರೆಗೆ ಹಿಂಬಾಲಿಸಿ, ಕಾರಿನ ಮೇಲೆ ಸಿಮೆಂಟ್ ಇಟ್ಟಿಗೆ ಎಸೆದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಅರವಿಂದ್ ಬಾರದ್ವಾಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಹರ್ಷ, ಭರತ್, ಸಂದೀಪ್, ತಿಮ್ಮರಾಜ್, ಅಭಿ ಹಾಗೂ ಲತಿಫ್ ಸೇರಿ ಆರು ಜನರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ

Leave a Reply

Your email address will not be published. Required fields are marked *

error: Content is protected !!