ದೊಡ್ಡಬಳ್ಳಾಪುರದಲ್ಲಿ ಪಂಚರತ್ನ ರಥಯಾತ್ರೆಯನ್ನು ಸ್ವಾಗತಿಸಲು ಸಿದ್ಧತೆ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ‘ಪಂಚರತ್ನ’ ರಥಯಾತ್ರೆಯು ನ. 29ರಂದು ತಾಲೂಕಿಗೆ ಕಸಬಾ ಹೋಬಳಿಯ ನಾಗದೇನಹಳ್ಳಿ ಗ್ರಾಮದ ಮೂಲಕ ಪ್ರವೇಶಿಸಲಿದ್ದು, ಮಧುರೆ ಹೋಬಳಿಯ ಕನಸವಾಡಿ ಗ್ರಾಮದಲ್ಲಿ ಬೃಹತ್ ಸಮಾವೇಶ ಮುಖಾಂತರ ಕೊನೆಗಳ್ಳಲಿದೆ. ತಾಲೂಕಿಗೆ ಕುಮಾರಸ್ವಾಮಿ ಆಗಮನ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ.

ಜೆಡಿಎಸ್ ಕಾರ್ಯಕರ್ತರಲ್ಲಿ ಹೆಚ್ಚಿದ ಉತ್ಸಾಹ:

ವಿಧಾನಸಭೆ ಚುನಾವಣೆಗೆ ಪಂಚರತ್ನ ಯಾತ್ರೆ ಮೂಲಕ ರಣಕಹಳೆ ಮೊಳಗಿಸಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ ಇಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದಾರೆ. ಮತ್ತೊಮ್ಮೆ ನೆಚ್ಚಿನ ನಾಯಕರು ಕ್ಷೇತ್ರಕ್ಕೆ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಗ್ರಾಮೀಣ ಭಾಗಕ್ಕೆ ಆಗಮಿಸುತ್ತಿದ್ದಾರೆ. ರೈತರ ಗಮನ ಸೆಳೆದು ಪಾಂಚಜನ್ಯ ಮೊಳಗಿಸಲು ತಾಲೂಕಿನ ಜೆಡಿಎಸ್ ಮುಖಂಡರು ರಣತಂತ್ರ ರೂಪಿಸಿದ್ದಾರೆ.

800 ಬೈಕ್, ಬೃಹತ್‌ಹಾರಗಳ ಮೂಲಕ ಸ್ವಾಗತ:

ಹೆಚ್‌ಡಿಕೆ ಸಾರಥ್ಯದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆ ಮೂಲಕ ತಾಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಚೈತನ್ಯ ತುಂಬಲು ನಿರ್ಧರಿಸುವ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ ಕೋರಲು ತಾಲೂಕು ಜೆಡಿಎಸ್ ಮುಖಂಡರು ಸಕಲ ಸಿದ್ಧತೆ ನಡೆಸಿದ್ದಾರೆ. ಬರೋಬ್ಬರಿ 800 ಬೈಕ್, ಒಂದು ಬೃಹತ್ ಜೋಳದ ಹಾರ, ಮೂರು ಮೆಣಸಿನಕಾಯಿ ಹಾರ, ಒಂದು ತುಳಸಿಹಾರ, ಆಪಲ್ ಹಾರ ಸೇರಿದಂತೆ ಹೂಮಾಲೆ ಹಾಕಲಿದ್ದಾರೆ. ಹೆಚ್‌ಡಿಕೆ ಸಂಚರಿಸುವ ಮಾರ್ಗದುದ್ದಕ್ಕೂ ಕಾರ್ಯಕರ್ತರಿಗಾಗಿ ಊಟ, ನೀರಿನ ವ್ಯವಸ್ಥೆ ಕೂಡ ಮಾಡಿಕೊಂಡಿದ್ದಾರೆ.

ಒಂದಾದ ಜೆಡಿಎಸ್ ನಾಯಕರು:

ತಾಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರ ಸಂಖ್ಯೆ ಉಳಿದೆರಡು ರಾಷ್ಟೀಯ ಪಕ್ಷಗಳಿಗಿಂತ ಹೆಚ್ಚಿಗೆ ಇದ್ದಾರೆ. ಆದರೆ ವಿಧಾನಸಭೆ ಚುನಾಚಣೆ ಸಂದರ್ಭಗಳಲ್ಲಿ ನಾಯಕರಲ್ಲಿ ಉಂಟಾಗುವ ಕೋಪ, ರಾಜಕೀಯ ದ್ವೇಷ, ಮುನಿಸುಗಳಿಂದ ಸೃಷ್ಠಿಯಾಗುವ ಬಣ ರಾಜಕೀಯದಿಂದ ಕಳೆದೆರೆಡು ಚುನಾವಣೆಯಲ್ಲಿ ಸೋಲುಂಟಾಗಿದೆ. ಸೂಕ್ತ ನಾಯಕ್ವವಿಲ್ಲದೆ ಕೊರಗುತ್ತಿರುವ ಕಾರ್ಯಕರ್ತರಿಗೆ ಈ ಬಾರಿ ಎಲ್ಲವೂ ಸರಿಹೋಗುವ ನಿರೀಕ್ಷೆ ಗರಿಗೆದರಿದೆ. ಇದಕ್ಕೆ ಸಾಕ್ಷಿ ಪಂಚರತ್ನ ಯಾತ್ರೆ ಸ್ವಾಗತಕ್ಕೆ ತಾಲೂಕಿನ ಎಲ್ಲಾ ಕಿರಿಯ, ಹಿರಿಯ ಕಾರ್ಯಕರ್ತರು ಒಗ್ಗಟ್ಟಿನಿಂದ ಒಂದಾಗಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪತ್ರಿಕಾಗೋಷ್ಠಿ ನಡೆಸಿರುವುದು.

ಭಿನ್ನಮತ ಶಮನಕ್ಕೆ ಹೆಚ್‌ಡಿಕೆ ಮುಲಾಮು:

ತಾಲೂಕಿನ ಜೆಡಿಎಸ್ ಮುಖಂಡರಲ್ಲಿನ ಮುಸುಕಿನ ಗುದ್ದಾಟವನ್ನು ಶಮನ ಮಾಡುವ ನಿಟ್ಟಿನಲ್ಲಿ ಕುಮಾರಸ್ವಾಮಿ ಹೆಜ್ಜೆ ಇಟ್ಟಿದ್ದಾರೆ. ಈ ದಿಸೆಯಲ್ಲಿ ತಾಲೂಕಿನ ಎಲ್ಲಾ ನಾಯಕರು ಒಂದಾಗಿದ್ದೇವೆ ಎಂಬುದನ್ನು ಸ್ಪಷ್ಟಪಡಿಸಿದರೆ ಮಾತ್ರ ನಾನು ನಿಮ್ಮ ತಾಲೂಕಿಗೆ ಬರಲಿದ್ದೇನೆ. ನಿವೆಲ್ಲಾ ಒಂದಾದರೆ ಮಾತ್ರೆ ಜೆಡಿಎಸ್ ಗೆಲ್ಲಲು ಸಾಧ್ಯ ಎಂದು ಖಡಕ್ ಸೂಚನೆ ಕೊಟ್ಟಿರುವ ಹೆಚ್‌ಡಿಕೆ, ಪಂಚರತ್ನ ಯಾತ್ರೆ ವೇಳೆ ನಾಯಕರಲ್ಲಿನ ಭಿನ್ನಮತಕ್ಕೆ ತೆರೆ ಎಳೆಯುವ ಭರವಸೆ ಮೂಡಿದೆ.

ಕಾಂಗ್ರೆಸ್-ಜೆಡಿಎಸ್ ಸಾಂಪ್ರದಾಯಿಕ ಎದುರಾಳಿ:
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಅವಿಭಜಿತ ಕೋಲಾರ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿಯೂ ದೇವೇಗೌಡರ ಬೆಂಬಲಿಗರು ಜನತಾದಳದಿಂದ ಗೆಲುವು ಸಾಧಿಸಿದ್ದರು. ಈ ಹಿಂದಿನ ನಗರ ಸ್ಥಳೀಯ ಸಂಸ್ಥೆಗಳು, ವಿಧಾನ ಪರಿಷತ್, ವಿಧಾನಸಭೆ ಚುನಾವಣೆಗಳ ಮತ ಗಳಿಕೆಯ ಲೆಕ್ಕ ನೋಡಿದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಾಂಪ್ರದಾಯಿಕ ಎದುರಾಳಿಗಳಾಗಿವೆ.

ತಾಲೂಕಿನಲ್ಲಿ ಜೆಡಿಎಸ್‌ಗೆ ಉತ್ತಮ ನೆಲೆ ಇದೆ. ನಿಷ್ಠಾವಂತ ಕಾರ್ಯಕರ್ತರ ಪಡೆ ಇದೆ. ಕಳೆದೆರೆಡು ಚುನಾವಣೆಯಲ್ಲಿ ನಾಯಕರಲ್ಲಿನ ಹೊಂದಾಣಿಕೆ ಕೊರತೆಯಿಂದ ಸೋಲುಂಟಾಗಿತ್ತು. ಪಂಚರತ್ನ ಯಾತ್ರೆ ಮೂಲಕ ತಾಲೂಕಿನಲ್ಲಿ ಚುನಾವಣಾ ಕಾವು ಮತ್ತಷ್ಟು ಏರಲಿದೆ. ಈ ಬಾರಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ  ಎಂದು ಜೆಡಿಎಸ್ ಮುಖಂಡ ಹುಸ್ಕೂರು ಆನಂದ್ ಹೇಳಿದರು.

ನಮ್ಮ ನಾಯಕ ಕುಮಾರಸ್ವಾಮಿ ಸೂಚನೆಯಂತೆ ಎಲ್ಲಾ ನಾಯಕರೂ ಒಂದಾಗಿ ಚುನಾವಣೆ ಎದುರಿಸಲಿದ್ದೇವೆ. 30 ವರ್ಷಗಳಿಂದ ತಾಲೂಕಿನಲ್ಲಿ ಜೆಡಿಎಸ್ ಬಾವುಟ ಹಾರಿಲ್ಲ. ಈ ಬಾರಿ ಯಾವುದೇ ಗೊಂದಲವಿಲ್ಲದೆ ಜೆಡಿಎಸ್ ಗೆಲ್ಲಿಸುವ ಕೆಲಸ ಎಲ್ಲಾ ನಾಯಕರು ಮಾಡಲಿದ್ದಾರೆ. ಜೆಡಿಎಸ್ ಮುಖಂಡ ಹರೀಶ್ ಗೌಡ ತಿಳಿಸಿದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

7 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

11 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

20 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago