ದೊಡ್ಡಬಳ್ಳಾಪುರದಲ್ಲಿ ಬಸ್ಸಿನ ಸಮಸ್ಯೆ- ಪ್ರಯಾಣಿಕರಿಂದ ಪ್ರತಿಭಟನೆ- ಮಾಧ್ಯಮಗಳ ವರದಿ ಬೆನ್ನಲ್ಲೇ.. ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ವಿಪಕ್ಷನಾಯಕ ಆರ್.ಅಶೋಕ್

ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಪಾಪರ್ ಸರ್ಕಾರದ ಜೇಬು ತುಂಬಿಸಿಕೊಳ್ಳಲು ಬಸ್ ದರ ಏರಿಕೆ ಮಾಡುವ ಮುನ್ನ.. ಸಾರಿಗೆ ವ್ಯವಸ್ಥೆಯಲ್ಲಿ ಆಗುತ್ತಿರುವ ಎಡವಟ್ಟುಗಳನ್ನು ಸರಿಮಾಡಿ. ವಿದ್ಯಾರ್ಥಿಗಳ ಪರದಾಟಕ್ಕೆ ಮುಕ್ತಿ ನೀಡಿ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ, ಬೆಂಗಳೂರಿನಿಂದ ದೊಡ್ಡಬಳ್ಳಾಪುರ ನಗರಕ್ಕೆ ಆಫೀಸ್, ಶಾಲಾ-ಕಾಲೇಜುಗಳು, ಆಸ್ಪತ್ರೆ, ಕೋರ್ಟ್-ಕಚೇರಿ ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಆಗದೇ ಪರದಾಡುವಂತಾಗಿದೆ. ಈ ಹಿನ್ನೆಲೆ ಹೆಚ್ಚುವರಿ ಬಸ್ ಗಳನ್ನ ನೀಡಿ ಎಂದು ಹಲವು ಬಾರಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಹೆಚ್ಚುವರಿ ಬಸ್ ಗಳನ್ನ ನೀಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಇಂದು ಬೆಳಗ್ಗೆ ಪ್ರಯಾಣಿಕರು ನಗರದ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದರು.

ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು. ಈ ಆಧಾರದ ಮೇಲೆ ಸರ್ಕಾರವನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

6 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago