ದೊಡ್ಡಬಳ್ಳಾಪುರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಇಂದು ಒಂದೇ ದಿನ ನಗರದ ಹಲವು ಕಡೆ ಐದಕ್ಕೂ ಹೆಚ್ಚು ಮಂದಿಗೆ ನಾಯಿಗಳು ಕಚ್ಚಿವೆ. ಒಬ್ಬರಿಗೆ ಬೆಕ್ಕು ಕಚ್ಚಿ ಗಾಯಪಡಿಸಿದೆ.
ದೊಡ್ಡಬಳ್ಳಾಪುರದ ತೊಗರಿಘಟ್ಟ ಗ್ರಾಮದಲ್ಲಿ 24 ವರ್ಷದ ವ್ಯಕ್ತಿಗೆ, ಪಾಲನಜೋಗಿಹಳ್ಳಿಯ 7 ವರ್ಷದ ಇಬ್ಬರು ಮಕ್ಕಳಿಗೆ, ಶಾಂತಿನಗರ 6 ವರ್ಷದ ಬಾಲಕಿಗೆ ನಾಯಿಗಳು ಕಚ್ಚಿದ್ದು, ಒಬ್ಬರಿಗೆ ಬೆಕ್ಕು ಕಡಿತದಿಂದ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ…
ನಾಯಿ ಹಾಗೂ ಬೆಕ್ಕು ಕಡಿತದಿಂದ ಗಾಯಗೊಂಡಿರುವವರು, ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ..
ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳು, ಸೈಕಲ್ ಮತ್ತು ಬೈಕ್ ಸಂಚರಿಸುವ ವೇಳೆ ಹಿಂಬಾಲಿಸಿಕೊಂಡು ಬಂದು ದಾಳಿ ನಡೆಸುತ್ತವೆ. ಬೀದಿ, ರಸ್ತೆಗಳಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ.
ರೇಬಿಸ್ ರೋಗ ಮತ್ತು ಪ್ರಾಣಾಪಾಯದ ಭೀತಿ ಜನರಲ್ಲಿ ಹೆಚ್ಚಾಗಿದೆ. ಸಾರ್ವಜನಿಕರು, ಮಕ್ಕಳು ಮತ್ತು ಬೈಕ್ ಸವಾರರು ಓಡಾಡಲು ಭಯಪಡುವಂತಾಗಿದೆ.
ಎಲ್ಲೆಂದರಲ್ಲಿ ಹಾಕಲಾಗುತ್ತಿರುವ ಮಾಂಸ ತ್ಯಾಜ್ಯ, ಕಸದ ರಾಶಿ ನಾಯಿಗಳ ಮತ್ತೊಂದು ಅಡ್ಡೆಯಾಗಿದ್ದು, ತ್ಯಾಜ್ಯದಲ್ಲಿನ ಆಹಾರ ತಿನ್ನಲು ಶ್ವಾನಗಳ ಗುಂಪುಗಳ ನಡುವೆ ಕಾದಾಟ ನಡೆಯುತ್ತಲೆ ಇರುತ್ತದೆ. ಈ ವೇಳೆ ಚಲಿಸುವ ವಾಹನಗಳಿಗೆ ಅಡ್ಡ ಬಂದು ವಾಹನ ಸವಾರರು ಬೀಳುವುದು ಸಾಮಾನ್ಯವಾಗಿದೆ.
ಕೂಡಲೇ ಬೀದಿ ನಾಯಿಗಳ ಹಾವಳಿಯನ್ನು ಕಡಿಮೆಗೊಳಿಸಿ ಸಾರ್ವಜನಿಕರ ನೆಮ್ಮದಿ ಜೀವನಕ್ಕೆ ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ….
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…