ದೊಡ್ಡಬಳ್ಳಾಪುರದಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ: ಒಂದೇ ದಿನ ನಾಲ್ಕಕ್ಕೂ ಹೆಚ್ಚು ಮಂದಿಗೆ ನಾಯಿ ಕಡಿತ: ಭಯಭೀತರಾದ ಜನ

ದೊಡ್ಡಬಳ್ಳಾಪುರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಇಂದು ಒಂದೇ ದಿನ ನಗರದ ಹಲವು ಕಡೆ ಐದಕ್ಕೂ ಹೆಚ್ಚು ಮಂದಿಗೆ ನಾಯಿಗಳು ಕಚ್ಚಿವೆ. ಒಬ್ಬರಿಗೆ ಬೆಕ್ಕು ಕಚ್ಚಿ ಗಾಯಪಡಿಸಿದೆ.

ದೊಡ್ಡಬಳ್ಳಾಪುರದ ತೊಗರಿಘಟ್ಟ ಗ್ರಾಮದಲ್ಲಿ 24 ವರ್ಷದ ವ್ಯಕ್ತಿಗೆ, ಪಾಲನಜೋಗಿಹಳ್ಳಿಯ 7 ವರ್ಷದ ಇಬ್ಬರು ಮಕ್ಕಳಿಗೆ, ಶಾಂತಿನಗರ 6 ವರ್ಷದ ಬಾಲಕಿಗೆ ನಾಯಿಗಳು ಕಚ್ಚಿದ್ದು, ಒಬ್ಬರಿಗೆ ಬೆಕ್ಕು ಕಡಿತದಿಂದ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ…

ನಾಯಿ ಹಾಗೂ ಬೆಕ್ಕು ಕಡಿತದಿಂದ ಗಾಯಗೊಂಡಿರುವವರು, ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ..

ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳು, ಸೈಕಲ್‌ ಮತ್ತು ಬೈಕ್‌ ಸಂಚರಿಸುವ ವೇಳೆ ಹಿಂಬಾಲಿಸಿಕೊಂಡು ಬಂದು ದಾಳಿ ನಡೆಸುತ್ತವೆ. ಬೀದಿ, ರಸ್ತೆಗಳಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ.

ರೇಬಿಸ್ ರೋಗ ಮತ್ತು ಪ್ರಾಣಾಪಾಯದ ಭೀತಿ ಜನರಲ್ಲಿ ಹೆಚ್ಚಾಗಿದೆ. ಸಾರ್ವಜನಿಕರು, ಮಕ್ಕಳು ಮತ್ತು ಬೈಕ್ ಸವಾರರು ಓಡಾಡಲು ಭಯಪಡುವಂತಾಗಿದೆ.

ಎಲ್ಲೆಂದರಲ್ಲಿ ಹಾಕಲಾಗುತ್ತಿರುವ ಮಾಂಸ ತ್ಯಾಜ್ಯ, ಕಸದ ರಾಶಿ ನಾಯಿಗಳ ಮತ್ತೊಂದು ಅಡ್ಡೆಯಾಗಿದ್ದು, ತ್ಯಾಜ್ಯದಲ್ಲಿನ ಆಹಾರ ತಿನ್ನಲು ಶ್ವಾನಗಳ ಗುಂಪುಗಳ ನಡುವೆ ಕಾದಾಟ ನಡೆಯುತ್ತಲೆ ಇರುತ್ತದೆ. ಈ ವೇಳೆ ಚಲಿಸುವ ವಾಹನಗಳಿಗೆ ಅಡ್ಡ ಬಂದು ವಾಹನ ಸವಾರರು ಬೀಳುವುದು ಸಾಮಾನ್ಯವಾಗಿದೆ.

ಕೂಡಲೇ ಬೀದಿ ನಾಯಿಗಳ ಹಾವಳಿಯನ್ನು ಕಡಿಮೆಗೊಳಿಸಿ ಸಾರ್ವಜನಿಕರ ನೆಮ್ಮದಿ ಜೀವನಕ್ಕೆ ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ….

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago