ದೊಡ್ಡಬಳ್ಳಾಪುರದಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ: ಒಂದೇ ದಿನ ನಾಲ್ಕಕ್ಕೂ ಹೆಚ್ಚು ಮಂದಿಗೆ ನಾಯಿ ಕಡಿತ: ಭಯಭೀತರಾದ ಜನ

ದೊಡ್ಡಬಳ್ಳಾಪುರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಇಂದು ಒಂದೇ ದಿನ ನಗರದ ಹಲವು ಕಡೆ ಐದಕ್ಕೂ ಹೆಚ್ಚು ಮಂದಿಗೆ ನಾಯಿಗಳು ಕಚ್ಚಿವೆ. ಒಬ್ಬರಿಗೆ ಬೆಕ್ಕು ಕಚ್ಚಿ ಗಾಯಪಡಿಸಿದೆ.

ದೊಡ್ಡಬಳ್ಳಾಪುರದ ತೊಗರಿಘಟ್ಟ ಗ್ರಾಮದಲ್ಲಿ 24 ವರ್ಷದ ವ್ಯಕ್ತಿಗೆ, ಪಾಲನಜೋಗಿಹಳ್ಳಿಯ 7 ವರ್ಷದ ಇಬ್ಬರು ಮಕ್ಕಳಿಗೆ, ಶಾಂತಿನಗರ 6 ವರ್ಷದ ಬಾಲಕಿಗೆ ನಾಯಿಗಳು ಕಚ್ಚಿದ್ದು, ಒಬ್ಬರಿಗೆ ಬೆಕ್ಕು ಕಡಿತದಿಂದ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ…

ನಾಯಿ ಹಾಗೂ ಬೆಕ್ಕು ಕಡಿತದಿಂದ ಗಾಯಗೊಂಡಿರುವವರು, ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ..

ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳು, ಸೈಕಲ್‌ ಮತ್ತು ಬೈಕ್‌ ಸಂಚರಿಸುವ ವೇಳೆ ಹಿಂಬಾಲಿಸಿಕೊಂಡು ಬಂದು ದಾಳಿ ನಡೆಸುತ್ತವೆ. ಬೀದಿ, ರಸ್ತೆಗಳಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ.

ರೇಬಿಸ್ ರೋಗ ಮತ್ತು ಪ್ರಾಣಾಪಾಯದ ಭೀತಿ ಜನರಲ್ಲಿ ಹೆಚ್ಚಾಗಿದೆ. ಸಾರ್ವಜನಿಕರು, ಮಕ್ಕಳು ಮತ್ತು ಬೈಕ್ ಸವಾರರು ಓಡಾಡಲು ಭಯಪಡುವಂತಾಗಿದೆ.

ಎಲ್ಲೆಂದರಲ್ಲಿ ಹಾಕಲಾಗುತ್ತಿರುವ ಮಾಂಸ ತ್ಯಾಜ್ಯ, ಕಸದ ರಾಶಿ ನಾಯಿಗಳ ಮತ್ತೊಂದು ಅಡ್ಡೆಯಾಗಿದ್ದು, ತ್ಯಾಜ್ಯದಲ್ಲಿನ ಆಹಾರ ತಿನ್ನಲು ಶ್ವಾನಗಳ ಗುಂಪುಗಳ ನಡುವೆ ಕಾದಾಟ ನಡೆಯುತ್ತಲೆ ಇರುತ್ತದೆ. ಈ ವೇಳೆ ಚಲಿಸುವ ವಾಹನಗಳಿಗೆ ಅಡ್ಡ ಬಂದು ವಾಹನ ಸವಾರರು ಬೀಳುವುದು ಸಾಮಾನ್ಯವಾಗಿದೆ.

ಕೂಡಲೇ ಬೀದಿ ನಾಯಿಗಳ ಹಾವಳಿಯನ್ನು ಕಡಿಮೆಗೊಳಿಸಿ ಸಾರ್ವಜನಿಕರ ನೆಮ್ಮದಿ ಜೀವನಕ್ಕೆ ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ….

Ramesh Babu

Journalist

Recent Posts

ಸಂಬಂಧಗಳ ಬಲೆಯೊಳಗೆ….

ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…

7 hours ago

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

1 day ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

3 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

3 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

3 days ago