ದೊಡ್ಡಬಳ್ಳಾಪುರದಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ: ಒಂದೇ ದಿನ ನಾಲ್ಕಕ್ಕೂ ಹೆಚ್ಚು ಮಂದಿಗೆ ನಾಯಿ ಕಡಿತ: ಭಯಭೀತರಾದ ಜನ

ದೊಡ್ಡಬಳ್ಳಾಪುರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಇಂದು ಒಂದೇ ದಿನ ನಗರದ ಹಲವು ಕಡೆ ಐದಕ್ಕೂ ಹೆಚ್ಚು ಮಂದಿಗೆ ನಾಯಿಗಳು ಕಚ್ಚಿವೆ. ಒಬ್ಬರಿಗೆ ಬೆಕ್ಕು ಕಚ್ಚಿ ಗಾಯಪಡಿಸಿದೆ.

ದೊಡ್ಡಬಳ್ಳಾಪುರದ ತೊಗರಿಘಟ್ಟ ಗ್ರಾಮದಲ್ಲಿ 24 ವರ್ಷದ ವ್ಯಕ್ತಿಗೆ, ಪಾಲನಜೋಗಿಹಳ್ಳಿಯ 7 ವರ್ಷದ ಇಬ್ಬರು ಮಕ್ಕಳಿಗೆ, ಶಾಂತಿನಗರ 6 ವರ್ಷದ ಬಾಲಕಿಗೆ ನಾಯಿಗಳು ಕಚ್ಚಿದ್ದು, ಒಬ್ಬರಿಗೆ ಬೆಕ್ಕು ಕಡಿತದಿಂದ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ…

ನಾಯಿ ಹಾಗೂ ಬೆಕ್ಕು ಕಡಿತದಿಂದ ಗಾಯಗೊಂಡಿರುವವರು, ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ..

ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳು, ಸೈಕಲ್‌ ಮತ್ತು ಬೈಕ್‌ ಸಂಚರಿಸುವ ವೇಳೆ ಹಿಂಬಾಲಿಸಿಕೊಂಡು ಬಂದು ದಾಳಿ ನಡೆಸುತ್ತವೆ. ಬೀದಿ, ರಸ್ತೆಗಳಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ.

ರೇಬಿಸ್ ರೋಗ ಮತ್ತು ಪ್ರಾಣಾಪಾಯದ ಭೀತಿ ಜನರಲ್ಲಿ ಹೆಚ್ಚಾಗಿದೆ. ಸಾರ್ವಜನಿಕರು, ಮಕ್ಕಳು ಮತ್ತು ಬೈಕ್ ಸವಾರರು ಓಡಾಡಲು ಭಯಪಡುವಂತಾಗಿದೆ.

ಎಲ್ಲೆಂದರಲ್ಲಿ ಹಾಕಲಾಗುತ್ತಿರುವ ಮಾಂಸ ತ್ಯಾಜ್ಯ, ಕಸದ ರಾಶಿ ನಾಯಿಗಳ ಮತ್ತೊಂದು ಅಡ್ಡೆಯಾಗಿದ್ದು, ತ್ಯಾಜ್ಯದಲ್ಲಿನ ಆಹಾರ ತಿನ್ನಲು ಶ್ವಾನಗಳ ಗುಂಪುಗಳ ನಡುವೆ ಕಾದಾಟ ನಡೆಯುತ್ತಲೆ ಇರುತ್ತದೆ. ಈ ವೇಳೆ ಚಲಿಸುವ ವಾಹನಗಳಿಗೆ ಅಡ್ಡ ಬಂದು ವಾಹನ ಸವಾರರು ಬೀಳುವುದು ಸಾಮಾನ್ಯವಾಗಿದೆ.

ಕೂಡಲೇ ಬೀದಿ ನಾಯಿಗಳ ಹಾವಳಿಯನ್ನು ಕಡಿಮೆಗೊಳಿಸಿ ಸಾರ್ವಜನಿಕರ ನೆಮ್ಮದಿ ಜೀವನಕ್ಕೆ ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ….

Ramesh Babu

Journalist

Recent Posts

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

4 hours ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

7 hours ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

18 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

1 day ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

1 day ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

1 day ago