ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಬಲಪಡಿಸುವ ಸಲುವಾಗಿ ನಮ್ಮ ಕ್ಲಿನಿಕ್ ಗಳಿಗೆ ಬುಧವಾರ ಚಾಲನೆ ನೀಡಲಾಯಿತು. ನಗರದ ಹಳೆಯ ನಗರಸಭೆ ಕಟ್ಟಡ, ವಿದ್ಯಾನಗರ ಹಾಗೂ ಬಾಶೆಟ್ಟಿಹಳ್ಳಿಯಲ್ಲಿ ‘ನಮ್ಮ ಕ್ಲಿನಿಕ್‘ಗಳನ್ನು ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಆರ್.ಲತಾ ಉದ್ಘಾಟಿಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ನೀಡಬೇಕು. ನಗರ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರನ್ನು ಗುರಿಯಾಗಿಸಿಕೊಂಡು ನಮ್ಮ ಕ್ಲಿನಿಕ್ ಸ್ಥಾಪಿಸಲಾಗಿದೆ. ಒಂದೇ ದಿನ ರಾಜ್ಯಾದ್ಯಂತ 114 ಕ್ಲಿನಿಕ್ ಗಳು ಉದ್ಘಾಟನೆಗೊಂಡಿವೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ಜಿಲ್ಲೆಯಲ್ಲಿ ಇಂದು ಒಟ್ಟು ಆರು ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ. ಹೊಸಕೋಟೆ ,ದೇವನಹಳ್ಳಿ ಹಾಗೂ ನೆಲಮಂಗಲದಲ್ಲಿ ತಲಾ ಒಂದರಂತೆ ಇನ್ನೂ ಮೂರು ಕ್ಲಿನಿಕ್ ಪ್ರಾರಂಭವಾಗಲಿವೆ ಎಂದರು. ಒಂದೇ ಸೂರಿನಡಿ 12 ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಲಿರುವ ನಮ್ಮ ಕ್ಲಿನಿಕ್ ಗಳು ಇಡೀ ದೇಶದಲ್ಲೇ ವಿನೂತನ ಯೋಜನೆಯಾಗಿದೆ ಎಂದು ಹೇಳಿದರು.
ಶಾಸಕ ವೆಂಕಟರಮಣಯ್ಯ ಮಾತನಾಡಿ ಜನರ ಆರೋಗ್ಯ ದೃಷ್ಠಿಯಿಂದ ಕ್ಲಿನಿಕ್ಗಳನ್ನು ತೆರೆದಿರುವುದು ಸಂತೋಷದ ಸಂಗತಿ, ಆದರೆ ಪ್ರತಿ ಕ್ಲಿನಿಕ್ಗಳಲ್ಲಿ ಕಡ್ಡಾಯವಾಗಿ ನುರಿತ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿ ಮತ್ತು ಸಲಕರಣೆಗಳು ಇರುವಂತೆ ನೋಡಿಕೊಳ್ಳಬೇಕಿದೆ ಎಂದರು.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ ತಾಜ್, ಸ್ಥಾಯಿ ಸಮಿತಿ ಅಧ್ಯಕ್ಷೆ ಆದಿಲಕ್ಷ್ಮಿ, ತಾಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ್, ನಗರಸಭೆ ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರು ಸೇರಿ ಆರೋಗ್ಯ ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…