ದೊಡ್ಡಬಳ್ಳಾಪುರದಲ್ಲಿ ಮೂರು ‘ನಮ್ಮ ಕ್ಲಿನಿಕ್’ ಲೋಕಾರ್ಪಣೆ

ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಬಲಪಡಿಸುವ ಸಲುವಾಗಿ ನಮ್ಮ ಕ್ಲಿನಿಕ್ ಗಳಿಗೆ ಬುಧವಾರ ಚಾಲನೆ ನೀಡಲಾಯಿತು. ನಗರದ ಹಳೆಯ ನಗರಸಭೆ ಕಟ್ಟಡ, ವಿದ್ಯಾನಗರ ಹಾಗೂ ಬಾಶೆಟ್ಟಿಹಳ್ಳಿಯಲ್ಲಿ ‘ನಮ್ಮ ಕ್ಲಿನಿಕ್‘ಗಳನ್ನು ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಆರ್.ಲತಾ ಉದ್ಘಾಟಿಸಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ನೀಡಬೇಕು. ನಗರ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರನ್ನು ಗುರಿಯಾಗಿಸಿಕೊಂಡು ನಮ್ಮ ಕ್ಲಿನಿಕ್ ಸ್ಥಾಪಿಸಲಾಗಿದೆ. ಒಂದೇ ದಿನ ರಾಜ್ಯಾದ್ಯಂತ 114 ಕ್ಲಿನಿಕ್ ಗಳು ಉದ್ಘಾಟನೆಗೊಂಡಿವೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲೆಯಲ್ಲಿ ಇಂದು ಒಟ್ಟು ಆರು ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ. ಹೊಸಕೋಟೆ ,ದೇವನಹಳ್ಳಿ ಹಾಗೂ ನೆಲಮಂಗಲದಲ್ಲಿ ತಲಾ ಒಂದರಂತೆ ಇನ್ನೂ ಮೂರು ಕ್ಲಿನಿಕ್ ಪ್ರಾರಂಭವಾಗಲಿವೆ ಎಂದರು. ಒಂದೇ ಸೂರಿನಡಿ 12 ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಲಿರುವ ನಮ್ಮ ಕ್ಲಿನಿಕ್ ಗಳು ಇಡೀ ದೇಶದಲ್ಲೇ ವಿನೂತನ ಯೋಜನೆಯಾಗಿದೆ ಎಂದು ಹೇಳಿದರು.

ಶಾಸಕ ವೆಂಕಟರಮಣಯ್ಯ ಮಾತನಾಡಿ ಜನರ ಆರೋಗ್ಯ ದೃಷ್ಠಿಯಿಂದ ಕ್ಲಿನಿಕ್‌ಗಳನ್ನು ತೆರೆದಿರುವುದು ಸಂತೋಷದ ಸಂಗತಿ, ಆದರೆ ಪ್ರತಿ ಕ್ಲಿನಿಕ್‌ಗಳಲ್ಲಿ ಕಡ್ಡಾಯವಾಗಿ ನುರಿತ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿ ಮತ್ತು ಸಲಕರಣೆಗಳು ಇರುವಂತೆ ನೋಡಿಕೊಳ್ಳಬೇಕಿದೆ ಎಂದರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ ತಾಜ್, ಸ್ಥಾಯಿ ಸಮಿತಿ ಅಧ್ಯಕ್ಷೆ ಆದಿಲಕ್ಷ್ಮಿ, ತಾಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ್, ನಗರಸಭೆ ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರು ಸೇರಿ ಆರೋಗ್ಯ ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

50 seconds ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

12 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

13 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

1 day ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

1 day ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago