ದೊಡ್ಡಬಳ್ಳಾಪುರದಲ್ಲಿ ಮೂರು ‘ನಮ್ಮ ಕ್ಲಿನಿಕ್’ ಲೋಕಾರ್ಪಣೆ

ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಬಲಪಡಿಸುವ ಸಲುವಾಗಿ ನಮ್ಮ ಕ್ಲಿನಿಕ್ ಗಳಿಗೆ ಬುಧವಾರ ಚಾಲನೆ ನೀಡಲಾಯಿತು. ನಗರದ ಹಳೆಯ ನಗರಸಭೆ ಕಟ್ಟಡ, ವಿದ್ಯಾನಗರ ಹಾಗೂ ಬಾಶೆಟ್ಟಿಹಳ್ಳಿಯಲ್ಲಿ ‘ನಮ್ಮ ಕ್ಲಿನಿಕ್‘ಗಳನ್ನು ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಆರ್.ಲತಾ ಉದ್ಘಾಟಿಸಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ನೀಡಬೇಕು. ನಗರ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರನ್ನು ಗುರಿಯಾಗಿಸಿಕೊಂಡು ನಮ್ಮ ಕ್ಲಿನಿಕ್ ಸ್ಥಾಪಿಸಲಾಗಿದೆ. ಒಂದೇ ದಿನ ರಾಜ್ಯಾದ್ಯಂತ 114 ಕ್ಲಿನಿಕ್ ಗಳು ಉದ್ಘಾಟನೆಗೊಂಡಿವೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲೆಯಲ್ಲಿ ಇಂದು ಒಟ್ಟು ಆರು ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ. ಹೊಸಕೋಟೆ ,ದೇವನಹಳ್ಳಿ ಹಾಗೂ ನೆಲಮಂಗಲದಲ್ಲಿ ತಲಾ ಒಂದರಂತೆ ಇನ್ನೂ ಮೂರು ಕ್ಲಿನಿಕ್ ಪ್ರಾರಂಭವಾಗಲಿವೆ ಎಂದರು. ಒಂದೇ ಸೂರಿನಡಿ 12 ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಲಿರುವ ನಮ್ಮ ಕ್ಲಿನಿಕ್ ಗಳು ಇಡೀ ದೇಶದಲ್ಲೇ ವಿನೂತನ ಯೋಜನೆಯಾಗಿದೆ ಎಂದು ಹೇಳಿದರು.

ಶಾಸಕ ವೆಂಕಟರಮಣಯ್ಯ ಮಾತನಾಡಿ ಜನರ ಆರೋಗ್ಯ ದೃಷ್ಠಿಯಿಂದ ಕ್ಲಿನಿಕ್‌ಗಳನ್ನು ತೆರೆದಿರುವುದು ಸಂತೋಷದ ಸಂಗತಿ, ಆದರೆ ಪ್ರತಿ ಕ್ಲಿನಿಕ್‌ಗಳಲ್ಲಿ ಕಡ್ಡಾಯವಾಗಿ ನುರಿತ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿ ಮತ್ತು ಸಲಕರಣೆಗಳು ಇರುವಂತೆ ನೋಡಿಕೊಳ್ಳಬೇಕಿದೆ ಎಂದರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ ತಾಜ್, ಸ್ಥಾಯಿ ಸಮಿತಿ ಅಧ್ಯಕ್ಷೆ ಆದಿಲಕ್ಷ್ಮಿ, ತಾಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ್, ನಗರಸಭೆ ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರು ಸೇರಿ ಆರೋಗ್ಯ ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

7 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

11 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

12 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

19 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago