ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.
ರಾಯಲ್ ಓಕ್ ಇನ್ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ನ ಅಧ್ಯಕ್ಷ ವಿಜಯ್ ಸುಬ್ರಮಣಿಯಂ, ವ್ಯವಸ್ಥಾಪಕ ನಿರ್ದೇಶಕ ಮಥನ್ ಸುಬ್ರಮಣಿಯಂ ಮತ್ತು ಫ್ರಾಂಚೈಸಿ ಪಾಲುದಾರ ಶ್ರೀ ದೀಪಕ್ ಶಿವಕುಮಾರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.
12000 ಚದರ ಅಡಿ ವಿಸ್ತೀರ್ಣದಲ್ಲಿರುವ ಈ ಮಳಿಗೆಯು ಸ್ಥಳೀಯ ಗ್ರಾಹಕರಿಗೆ ವಾಸದ ಕೋಣೆಗಳು, ಮಲಗುವ ಕೋಣೆಗಳಿಂದ ಹಿಡಿದು ಗೃಹಾಲಂಕಾರಕ್ಕೆ ಅಗತ್ಯವಾದ ಅಂತಾರಾಷ್ಟ್ರೀಯ ಗುಣಮಟ್ಟದ ವ್ಯಾಪಕ ಶ್ರೇಣಿಯ ಪೀಠೋಪಕರಣಗಳನ್ನು ಕೈಗೆಟಕುವ ಬೆಲೆಯಲ್ಲಿ ಒದಗಿಸಲಿದೆ.
“ಗ್ರಾಮೀಣ ಭಾಗದ ಗ್ರಾಹಕರನ್ನು ತಲುಪುವ ಸಂಸ್ಥೆಯ ಧ್ಯೇಯದ ಪ್ರತೀಕವಾಗಿ ಈ ಮಳಿಗೆ ಸಿದ್ಧಗೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ನಮ್ಮ ರೀಟೇಲ್ ಅಸ್ತಿತ್ವವನ್ನು ಇನ್ನಷ್ಟು ಬಲವರ್ಧನೆಗೊಳಿಸಿದ್ದೇವೆ. ಈ ಹೆಜ್ಜೆ ಸ್ಥಳೀಯ ಗ್ರಾಹಕರಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಪೀಠೋಪಕರಣಗಳನ್ನು ಕೈಗೆಟುಕುವ ಬೆಲೆಯಲ್ಲಿ ಒದಗಿಸುವ ಜತೆಗೆ, ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ನೀಡಲಿದೆ” ಎಂದು ವಿಜಯ್ ಸುಬ್ರಮಣಿಯಂ ಹೇಳಿದರು.
ಮಳಿಗೆ ವಿಳಾಸ: ಎಸ್ಎಲ್ವಿ ಕಾಂಪ್ಲೆಕ್ಸ್, ಕೊಡಿಗೆಹಳ್ಳಿ ಪಂಚಾಯತ್, ಆರ್ಎಂಸಿ ಮಾರುಕಟ್ಟೆ ಹತ್ತಿರ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ: 76250 34585
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…