ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.

ರಾಯಲ್‌ ಓಕ್‌ ಇನ್‌ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ಅಧ್ಯಕ್ಷ ವಿಜಯ್ ಸುಬ್ರಮಣಿಯಂ, ವ್ಯವಸ್ಥಾಪಕ ನಿರ್ದೇಶಕ ಮಥನ್ ಸುಬ್ರಮಣಿಯಂ ಮತ್ತು ಫ್ರಾಂಚೈಸಿ ಪಾಲುದಾರ ಶ್ರೀ ದೀಪಕ್ ಶಿವಕುಮಾರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.

12000 ಚದರ ಅಡಿ ವಿಸ್ತೀರ್ಣದಲ್ಲಿರುವ ಈ ಮಳಿಗೆಯು ಸ್ಥಳೀಯ ಗ್ರಾಹಕರಿಗೆ ವಾಸದ ಕೋಣೆಗಳು, ಮಲಗುವ ಕೋಣೆಗಳಿಂದ ಹಿಡಿದು ಗೃಹಾಲಂಕಾರಕ್ಕೆ ಅಗತ್ಯವಾದ ಅಂತಾರಾಷ್ಟ್ರೀಯ ಗುಣಮಟ್ಟದ ವ್ಯಾಪಕ ಶ್ರೇಣಿಯ ಪೀಠೋಪಕರಣಗಳನ್ನು ಕೈಗೆಟಕುವ ಬೆಲೆಯಲ್ಲಿ ಒದಗಿಸಲಿದೆ.

“ಗ್ರಾಮೀಣ ಭಾಗದ ಗ್ರಾಹಕರನ್ನು ತಲುಪುವ ಸಂಸ್ಥೆಯ ಧ್ಯೇಯದ ಪ್ರತೀಕವಾಗಿ ಈ ಮಳಿಗೆ ಸಿದ್ಧಗೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ನಮ್ಮ ರೀಟೇಲ್‌ ಅಸ್ತಿತ್ವವನ್ನು ಇನ್ನಷ್ಟು ಬಲವರ್ಧನೆಗೊಳಿಸಿದ್ದೇವೆ. ಈ ಹೆಜ್ಜೆ ಸ್ಥಳೀಯ ಗ್ರಾಹಕರಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಪೀಠೋಪಕರಣಗಳನ್ನು ಕೈಗೆಟುಕುವ ಬೆಲೆಯಲ್ಲಿ ಒದಗಿಸುವ ಜತೆಗೆ, ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ನೀಡಲಿದೆ” ಎಂದು ವಿಜಯ್ ಸುಬ್ರಮಣಿಯಂ ಹೇಳಿದರು.

ಮಳಿಗೆ ವಿಳಾಸ: ಎಸ್‌ಎಲ್‌ವಿ ಕಾಂಪ್ಲೆಕ್ಸ್, ಕೊಡಿಗೆಹಳ್ಳಿ ಪಂಚಾಯತ್, ಆರ್‌ಎಂಸಿ ಮಾರುಕಟ್ಟೆ ಹತ್ತಿರ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ: 76250 34585

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 hour ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

3 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

6 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

20 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago