ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.
ರಾಯಲ್ ಓಕ್ ಇನ್ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ನ ಅಧ್ಯಕ್ಷ ವಿಜಯ್ ಸುಬ್ರಮಣಿಯಂ, ವ್ಯವಸ್ಥಾಪಕ ನಿರ್ದೇಶಕ ಮಥನ್ ಸುಬ್ರಮಣಿಯಂ ಮತ್ತು ಫ್ರಾಂಚೈಸಿ ಪಾಲುದಾರ ಶ್ರೀ ದೀಪಕ್ ಶಿವಕುಮಾರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.
12000 ಚದರ ಅಡಿ ವಿಸ್ತೀರ್ಣದಲ್ಲಿರುವ ಈ ಮಳಿಗೆಯು ಸ್ಥಳೀಯ ಗ್ರಾಹಕರಿಗೆ ವಾಸದ ಕೋಣೆಗಳು, ಮಲಗುವ ಕೋಣೆಗಳಿಂದ ಹಿಡಿದು ಗೃಹಾಲಂಕಾರಕ್ಕೆ ಅಗತ್ಯವಾದ ಅಂತಾರಾಷ್ಟ್ರೀಯ ಗುಣಮಟ್ಟದ ವ್ಯಾಪಕ ಶ್ರೇಣಿಯ ಪೀಠೋಪಕರಣಗಳನ್ನು ಕೈಗೆಟಕುವ ಬೆಲೆಯಲ್ಲಿ ಒದಗಿಸಲಿದೆ.
“ಗ್ರಾಮೀಣ ಭಾಗದ ಗ್ರಾಹಕರನ್ನು ತಲುಪುವ ಸಂಸ್ಥೆಯ ಧ್ಯೇಯದ ಪ್ರತೀಕವಾಗಿ ಈ ಮಳಿಗೆ ಸಿದ್ಧಗೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ನಮ್ಮ ರೀಟೇಲ್ ಅಸ್ತಿತ್ವವನ್ನು ಇನ್ನಷ್ಟು ಬಲವರ್ಧನೆಗೊಳಿಸಿದ್ದೇವೆ. ಈ ಹೆಜ್ಜೆ ಸ್ಥಳೀಯ ಗ್ರಾಹಕರಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಪೀಠೋಪಕರಣಗಳನ್ನು ಕೈಗೆಟುಕುವ ಬೆಲೆಯಲ್ಲಿ ಒದಗಿಸುವ ಜತೆಗೆ, ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ನೀಡಲಿದೆ” ಎಂದು ವಿಜಯ್ ಸುಬ್ರಮಣಿಯಂ ಹೇಳಿದರು.
ಮಳಿಗೆ ವಿಳಾಸ: ಎಸ್ಎಲ್ವಿ ಕಾಂಪ್ಲೆಕ್ಸ್, ಕೊಡಿಗೆಹಳ್ಳಿ ಪಂಚಾಯತ್, ಆರ್ಎಂಸಿ ಮಾರುಕಟ್ಟೆ ಹತ್ತಿರ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ: 76250 34585
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…