ದೊಡ್ಡಬಳ್ಳಾಪುರದಲ್ಲಿ‌ ಶೇ 80.13ರಷ್ಟು ಮತದಾನ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಯು ಸುಸೂತ್ರ ಹಾಗೂ ಶಾಂತಿಯುತವಾಗಿ ಮುಕ್ತಾಯವಾಗಿದೆ.

ಸಂಜೆ 6ರ ವೇಳೆಗೆ ಶೇ. 80.13ರಷ್ಟು ಮತದಾನವಾಗಿದೆ. ಮತದಾರರು ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತು, ಶಾಂತಿಯುತವಾಗಿ ಹಕ್ಕು ಚಲಾಯಿಸಿದ್ದಾರೆ.

ಕ್ಷೇತ್ರದ ಒಟ್ಟು 1,08,921 ಪುರುಷ ಮತದಾರರು, 1,11,346 ಮಹಿಳಾ ಮತದಾರರ ಪೈಕಿ 88,663 ಪುರುಷರು, 87,835 ಮಹಿಳೆಯರು ಸೇರಿದಂತೆ ಒಟ್ಟು 1,76,498 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಬೆಳಿಗ್ಗೆ 10 ಗಂಟೆ ಹೊತ್ತಿಗೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ  ಕೇವಲ ಶೇ 10 ರಷ್ಟು ಮತದಾನ ದಾಖಲಾಗಿತ್ತು. ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1ರವರೆಗೆ ಶೇ 20 ರಷ್ಟು ಮತದಾನ ದಾಖಲಾಯಿತು.

ಮಧ್ಯಾಹ್ನ 1ರಿಂದ 3.30ರವರೆಗೆ ಮತ್ತೆ ಶೇ 19 ರಷ್ಟು ಮತದಾನ ಏರಿಕೆಯಾಯಿತು. 3.30ರಿಂದ ಸಂಜೆ 5.30 ರವರೆಗೆ ಶೇ 18 ರಷ್ಟು ಮತದಾನ ಹೆಚ್ಚಳವಾಯಿತು. ಸಂಜೆ 5 ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ 77.20 ರಷ್ಟು ಮತದಾನ ದಾಖಲಾಗಿತ್ತು. ಮತದಾನ ಮುಗಿಯವ ವೇಳೆಗೆ ಒಟ್ಟಾರೆ ಜಿಲ್ಲೆಯಲ್ಲಿ ಶೇ.81.90 ರಷ್ಟು ಮತದಾನ ನಡೆದಿದೆ.

ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾನದ ಶೇಕಡಾವಾರು ವಿವರ

178-ಹೊಸಕೋಟೆ ವಿಧಾನಸಭಾ ಕ್ಷೇತ್ರ: 86.44%

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: 82.69%

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ: 80.13%

181-ನೆಲಮಂಗಲ ವಿಧಾನಸಭಾ ಕ್ಷೇತ್ರ: 77.98%

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

4 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

8 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

17 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

23 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago