ದೊಡ್ಡಬಳ್ಳಾಪುರದಲ್ಲಿ‌ ಶೇ 80.13ರಷ್ಟು ಮತದಾನ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಯು ಸುಸೂತ್ರ ಹಾಗೂ ಶಾಂತಿಯುತವಾಗಿ ಮುಕ್ತಾಯವಾಗಿದೆ.

ಸಂಜೆ 6ರ ವೇಳೆಗೆ ಶೇ. 80.13ರಷ್ಟು ಮತದಾನವಾಗಿದೆ. ಮತದಾರರು ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತು, ಶಾಂತಿಯುತವಾಗಿ ಹಕ್ಕು ಚಲಾಯಿಸಿದ್ದಾರೆ.

ಕ್ಷೇತ್ರದ ಒಟ್ಟು 1,08,921 ಪುರುಷ ಮತದಾರರು, 1,11,346 ಮಹಿಳಾ ಮತದಾರರ ಪೈಕಿ 88,663 ಪುರುಷರು, 87,835 ಮಹಿಳೆಯರು ಸೇರಿದಂತೆ ಒಟ್ಟು 1,76,498 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಬೆಳಿಗ್ಗೆ 10 ಗಂಟೆ ಹೊತ್ತಿಗೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ  ಕೇವಲ ಶೇ 10 ರಷ್ಟು ಮತದಾನ ದಾಖಲಾಗಿತ್ತು. ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1ರವರೆಗೆ ಶೇ 20 ರಷ್ಟು ಮತದಾನ ದಾಖಲಾಯಿತು.

ಮಧ್ಯಾಹ್ನ 1ರಿಂದ 3.30ರವರೆಗೆ ಮತ್ತೆ ಶೇ 19 ರಷ್ಟು ಮತದಾನ ಏರಿಕೆಯಾಯಿತು. 3.30ರಿಂದ ಸಂಜೆ 5.30 ರವರೆಗೆ ಶೇ 18 ರಷ್ಟು ಮತದಾನ ಹೆಚ್ಚಳವಾಯಿತು. ಸಂಜೆ 5 ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ 77.20 ರಷ್ಟು ಮತದಾನ ದಾಖಲಾಗಿತ್ತು. ಮತದಾನ ಮುಗಿಯವ ವೇಳೆಗೆ ಒಟ್ಟಾರೆ ಜಿಲ್ಲೆಯಲ್ಲಿ ಶೇ.81.90 ರಷ್ಟು ಮತದಾನ ನಡೆದಿದೆ.

ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾನದ ಶೇಕಡಾವಾರು ವಿವರ

178-ಹೊಸಕೋಟೆ ವಿಧಾನಸಭಾ ಕ್ಷೇತ್ರ: 86.44%

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: 82.69%

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ: 80.13%

181-ನೆಲಮಂಗಲ ವಿಧಾನಸಭಾ ಕ್ಷೇತ್ರ: 77.98%

Ramesh Babu

Journalist

Recent Posts

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

2 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

2 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

4 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

5 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

5 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

6 hours ago