ದೊಡ್ಡಬಳ್ಳಾಪುರದಲ್ಲಿ ಹೆಚ್ಚಾದ ಬೈಕ್ ಕಳ್ಳತನ: ಬೈಕ್ ಪಾರ್ಕ್ ಮಾಡುವ ಮುನ್ನ ಇರಲಿ ಎಚ್ಚರ….!

ಇತ್ತೀಚಿಗೆ ದೊಡ್ಡಬಳ್ಳಾಪುರದಲ್ಲಿ ಬೈಕ್ ಕಳ್ಳತನ‌ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಬೈಕ್ ಕಳೆದುಕೊಂಡವರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ.

ಬೈಕ್ ಪಾರ್ಕ್ ಮಾಡಿ ಸ್ವಲ್ಪ‌ ಯಾಮಾರಿದರೆ ಸಾಕು ಪಾರ್ಕ್ ಮಾಡಿದ್ದ ಬೈಕ್ ಕ್ಷಣಾರ್ಧದಲ್ಲಿ ನಾಪತ್ತೆ ಆಗುತ್ತದೆ. ಇತ್ತೀಚೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಎರಡು ಬೈಕ್ ಗಳು ಕಳ್ಳರ ಪಾಲಾಗಿವೆ.

ಸೆ.11ರ ರಾತ್ರಿ ಖಾಸಗಿ ಬಿಲ್ಡಿಂಗ್ ನ ಕಾಂಪೌಂಡ್ ಒಳಗೆ ಬೈಕ್ ನಿಲ್ಲಿಸಲಾಗಿತ್ತು, ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಅ.4ರಂದು ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಬಳಿ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಆಸ್ಪತ್ರೆಯ ಒಳಗೆ ಹೋಗಿ ಒಂದು ತಾಸು ಬಿಟ್ಟು ಮತ್ತೆ ಆಸ್ಪತ್ರೆಯಿಂದ ಹೊರ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಹುಡುಕಾಟದಲ್ಲಿ ನಿರತರಾಗಿದ್ದಾರೆ.

ದಿನದಿಂದ ದಿನಕ್ಕೆ ಬೈಕ್ ಕಳವು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ತಮ್ಮ ದೈನಂದಿನ ಕೆಲಸಕ್ಕೆ ಅನಕೂಲವಾಗಲಿ ಎಂದು ಬೈಕ್​ಗಳನ್ನು ಖರೀದಿಸಿದರೆ, ಕಳ್ಳರು, ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಪೊಲೀಸರು ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಕಳ್ಳರನ್ನು ಪತ್ತೆ ಮಾಡುವ ಕೆಲಸ ಮಾಡಬೇಕಿದೆ. ಆ ಮೂಲಕ ಸಾರ್ವಜನಿಕರ ನೆಮ್ಮದಿ ಹಾಳಾಗದಂತೆ ನೋಡಿಕೊಳ್ಳುವ ಕೆಲಸ ಮಾಡಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

50 minutes ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

13 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

14 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

16 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

17 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

22 hours ago