ದೊಡ್ಡಬಳ್ಳಾಪುರ ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಜನರು ಹೆಚ್ಚಾಗಿ ಸೇರುವ ಬಸ್ ನಿಲ್ದಾಣ, ಮಾರುಕಟ್ಟೆ, ಪಾರ್ಕ್, ದೇವಸ್ಥಾನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಿಗೆ ತೆರಳಿ ಸರಗಳ್ಳರಿಂದ ಪಾರಾಗುವುದು ಹೇಗೆ ಎಂಬುದರ ಬಗ್ಗೆ ಮಹಿಳೆಯರು, ವೃದ್ಧರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.
ಸರಗಳ್ಳತನ ತಡೆಯುವ ಬಗ್ಗೆ ಸಲಹೆಗಳು :
1. ಒಂಟಿಯಾಗಿ ಜನರಿಲ್ಲದ ಪ್ರದೇಶಗಳಲ್ಲಿ ಹೆಂಗಸರು ಓಡಾಡುವುದನ್ನು ತಪ್ಪಿಸಿ.
2. ಒಂಟಿಯಾಗಿ ಓಡಾಡುವಾಗ ಅಪರಿಚಿತ ವ್ಯಕ್ತಿಗಳು ನಿಮ್ಮ ಬಳಿ ನಿಧಾನವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದಾಗ ಅವರ ಕೈಗೆಟಕುವ ಅಂತರದಲ್ಲಿ ನಿಲ್ಲಬೇಡಿ.
3. ಅನುಮಾನಾಸ್ಪದ ವಾಹನಗಳು ನಿಮ್ಮ ಬಳಿ ಬರುವಾಗ ವಾಹನದ ವಿಧ, ಬಣ್ಣ, ನೊಂದಣಿ ಸಂಖ್ಯೆ ವಾಹನ ಸವಾರರು ಧರಿಸಿರುವ ಬಟ್ಟೆ, ಚಹರೆ, ಮುಖದಲ್ಲಿ ಗುರುತಿಸಬಹುದಾದ ಯಾವುದಾದರೂ ವಿಶೇಷತೆಗಳು ಇತ್ಯಾದಿಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ
5. ವಾಯು ವಿಹಾರಕ್ಕೆ ಹೋಗುವ ಸಂದರ್ಭದಲ್ಲಿ ಚಿನ್ನದ ಸರಗಳನ್ನು ಬಟ್ಟೆಯಿಂದ ಮರೆ ಮಾಡಿಕೊಳ್ಳಿ
6. ಸರ ಮತ್ತು ಧರಿಸುವ ಬಟ್ಟೆಗೆ ಹೊಂದಿಸಿ ಸೇಫ್ಟಿ ಪಿನ್ಗಳನ್ನು ಹಾಕಿ.
8. ಮನೆಯಿಂದ ಹೊರಗೆ ಹೋಗುವಾಗ, ಅಂಗಡಿಗೆ ಹೋಗುವಾಗ, ಅಂಗಡಿಯಿಂದ ಸಾಮಾನು ಖರೀದಿಸಿ ಹೊರಡುವಾಗ ಜಾಗ್ರತೆ ಅಗತ್ಯ.
9. ಬೆಳಗಿನ ಸಮುಯದಲ್ಲಿ ದೇವಸ್ಥಾನಕ್ಕೆ, ಅಂಗಡಿಗೆ ಒಂಟಿಯಾಗಿ ಹೋಗುವುದನ್ನು ತಪ್ಪಿಸಿ.
11. ಕತ್ತಲೆ ಪ್ರದೇಶದಲ್ಲಿ ಪವರ್ ಕಟ್ ಆದ ಸಮಯದಲ್ಲಿ ನಡೆದಾಡುವಾಗ ನಿಮ್ಮ ಆಭರಣಗಳ ಕಡೆ ಹೆಚ್ಚಿನ ಗಮನ ವಹಿಸಿ ಹಾಗೂ ನಿಮ್ಮ ಜೊತೆಗಾರರಿಗೂ ಸರಗಳ್ಳತನಗಳ ಬಗ್ಗೆ ಮನವರಿಕೆ ಮಾಡಿಕೊಡಿ.
12. ಅಪರಾಧ ತಡೆ ಮತ್ತು ಪತ್ತೆ ಪೊಲಿಸರಿಗಷ್ಟೇ ಜವಾಬ್ದಾರಿ ಎಂದು ಭಾವಿಸಬೇಡಿ. ನಿಮ್ಮ ಸಹಕಾರ ಕೂಡ ಅತ್ಯಗತ್ಯ ಎಂದು ಜಾಗೃತಿ ಮೂಡಿಸಲಾಯಿತು.
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…