ದೊಡ್ಡಬಳ್ಳಾಪುರ ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಜನರು ಹೆಚ್ಚಾಗಿ ಸೇರುವ ಬಸ್ ನಿಲ್ದಾಣ, ಮಾರುಕಟ್ಟೆ, ಪಾರ್ಕ್, ದೇವಸ್ಥಾನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಿಗೆ ತೆರಳಿ ಸರಗಳ್ಳರಿಂದ ಪಾರಾಗುವುದು ಹೇಗೆ ಎಂಬುದರ ಬಗ್ಗೆ ಮಹಿಳೆಯರು, ವೃದ್ಧರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.
ಸರಗಳ್ಳತನ ತಡೆಯುವ ಬಗ್ಗೆ ಸಲಹೆಗಳು :
1. ಒಂಟಿಯಾಗಿ ಜನರಿಲ್ಲದ ಪ್ರದೇಶಗಳಲ್ಲಿ ಹೆಂಗಸರು ಓಡಾಡುವುದನ್ನು ತಪ್ಪಿಸಿ.
2. ಒಂಟಿಯಾಗಿ ಓಡಾಡುವಾಗ ಅಪರಿಚಿತ ವ್ಯಕ್ತಿಗಳು ನಿಮ್ಮ ಬಳಿ ನಿಧಾನವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದಾಗ ಅವರ ಕೈಗೆಟಕುವ ಅಂತರದಲ್ಲಿ ನಿಲ್ಲಬೇಡಿ.
3. ಅನುಮಾನಾಸ್ಪದ ವಾಹನಗಳು ನಿಮ್ಮ ಬಳಿ ಬರುವಾಗ ವಾಹನದ ವಿಧ, ಬಣ್ಣ, ನೊಂದಣಿ ಸಂಖ್ಯೆ ವಾಹನ ಸವಾರರು ಧರಿಸಿರುವ ಬಟ್ಟೆ, ಚಹರೆ, ಮುಖದಲ್ಲಿ ಗುರುತಿಸಬಹುದಾದ ಯಾವುದಾದರೂ ವಿಶೇಷತೆಗಳು ಇತ್ಯಾದಿಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ
5. ವಾಯು ವಿಹಾರಕ್ಕೆ ಹೋಗುವ ಸಂದರ್ಭದಲ್ಲಿ ಚಿನ್ನದ ಸರಗಳನ್ನು ಬಟ್ಟೆಯಿಂದ ಮರೆ ಮಾಡಿಕೊಳ್ಳಿ
6. ಸರ ಮತ್ತು ಧರಿಸುವ ಬಟ್ಟೆಗೆ ಹೊಂದಿಸಿ ಸೇಫ್ಟಿ ಪಿನ್ಗಳನ್ನು ಹಾಕಿ.
8. ಮನೆಯಿಂದ ಹೊರಗೆ ಹೋಗುವಾಗ, ಅಂಗಡಿಗೆ ಹೋಗುವಾಗ, ಅಂಗಡಿಯಿಂದ ಸಾಮಾನು ಖರೀದಿಸಿ ಹೊರಡುವಾಗ ಜಾಗ್ರತೆ ಅಗತ್ಯ.
9. ಬೆಳಗಿನ ಸಮುಯದಲ್ಲಿ ದೇವಸ್ಥಾನಕ್ಕೆ, ಅಂಗಡಿಗೆ ಒಂಟಿಯಾಗಿ ಹೋಗುವುದನ್ನು ತಪ್ಪಿಸಿ.
11. ಕತ್ತಲೆ ಪ್ರದೇಶದಲ್ಲಿ ಪವರ್ ಕಟ್ ಆದ ಸಮಯದಲ್ಲಿ ನಡೆದಾಡುವಾಗ ನಿಮ್ಮ ಆಭರಣಗಳ ಕಡೆ ಹೆಚ್ಚಿನ ಗಮನ ವಹಿಸಿ ಹಾಗೂ ನಿಮ್ಮ ಜೊತೆಗಾರರಿಗೂ ಸರಗಳ್ಳತನಗಳ ಬಗ್ಗೆ ಮನವರಿಕೆ ಮಾಡಿಕೊಡಿ.
12. ಅಪರಾಧ ತಡೆ ಮತ್ತು ಪತ್ತೆ ಪೊಲಿಸರಿಗಷ್ಟೇ ಜವಾಬ್ದಾರಿ ಎಂದು ಭಾವಿಸಬೇಡಿ. ನಿಮ್ಮ ಸಹಕಾರ ಕೂಡ ಅತ್ಯಗತ್ಯ ಎಂದು ಜಾಗೃತಿ ಮೂಡಿಸಲಾಯಿತು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…