ದೊಡ್ಡಬಳ್ಳಾಪುರ ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಜನರು ಹೆಚ್ಚಾಗಿ ಸೇರುವ ಬಸ್ ನಿಲ್ದಾಣ, ಮಾರುಕಟ್ಟೆ, ಪಾರ್ಕ್, ದೇವಸ್ಥಾನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಿಗೆ ತೆರಳಿ ಸರಗಳ್ಳರಿಂದ ಪಾರಾಗುವುದು ಹೇಗೆ ಎಂಬುದರ ಬಗ್ಗೆ ಮಹಿಳೆಯರು, ವೃದ್ಧರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.
ಸರಗಳ್ಳತನ ತಡೆಯುವ ಬಗ್ಗೆ ಸಲಹೆಗಳು :
1. ಒಂಟಿಯಾಗಿ ಜನರಿಲ್ಲದ ಪ್ರದೇಶಗಳಲ್ಲಿ ಹೆಂಗಸರು ಓಡಾಡುವುದನ್ನು ತಪ್ಪಿಸಿ.
2. ಒಂಟಿಯಾಗಿ ಓಡಾಡುವಾಗ ಅಪರಿಚಿತ ವ್ಯಕ್ತಿಗಳು ನಿಮ್ಮ ಬಳಿ ನಿಧಾನವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದಾಗ ಅವರ ಕೈಗೆಟಕುವ ಅಂತರದಲ್ಲಿ ನಿಲ್ಲಬೇಡಿ.
3. ಅನುಮಾನಾಸ್ಪದ ವಾಹನಗಳು ನಿಮ್ಮ ಬಳಿ ಬರುವಾಗ ವಾಹನದ ವಿಧ, ಬಣ್ಣ, ನೊಂದಣಿ ಸಂಖ್ಯೆ ವಾಹನ ಸವಾರರು ಧರಿಸಿರುವ ಬಟ್ಟೆ, ಚಹರೆ, ಮುಖದಲ್ಲಿ ಗುರುತಿಸಬಹುದಾದ ಯಾವುದಾದರೂ ವಿಶೇಷತೆಗಳು ಇತ್ಯಾದಿಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ
5. ವಾಯು ವಿಹಾರಕ್ಕೆ ಹೋಗುವ ಸಂದರ್ಭದಲ್ಲಿ ಚಿನ್ನದ ಸರಗಳನ್ನು ಬಟ್ಟೆಯಿಂದ ಮರೆ ಮಾಡಿಕೊಳ್ಳಿ
6. ಸರ ಮತ್ತು ಧರಿಸುವ ಬಟ್ಟೆಗೆ ಹೊಂದಿಸಿ ಸೇಫ್ಟಿ ಪಿನ್ಗಳನ್ನು ಹಾಕಿ.
8. ಮನೆಯಿಂದ ಹೊರಗೆ ಹೋಗುವಾಗ, ಅಂಗಡಿಗೆ ಹೋಗುವಾಗ, ಅಂಗಡಿಯಿಂದ ಸಾಮಾನು ಖರೀದಿಸಿ ಹೊರಡುವಾಗ ಜಾಗ್ರತೆ ಅಗತ್ಯ.
9. ಬೆಳಗಿನ ಸಮುಯದಲ್ಲಿ ದೇವಸ್ಥಾನಕ್ಕೆ, ಅಂಗಡಿಗೆ ಒಂಟಿಯಾಗಿ ಹೋಗುವುದನ್ನು ತಪ್ಪಿಸಿ.
11. ಕತ್ತಲೆ ಪ್ರದೇಶದಲ್ಲಿ ಪವರ್ ಕಟ್ ಆದ ಸಮಯದಲ್ಲಿ ನಡೆದಾಡುವಾಗ ನಿಮ್ಮ ಆಭರಣಗಳ ಕಡೆ ಹೆಚ್ಚಿನ ಗಮನ ವಹಿಸಿ ಹಾಗೂ ನಿಮ್ಮ ಜೊತೆಗಾರರಿಗೂ ಸರಗಳ್ಳತನಗಳ ಬಗ್ಗೆ ಮನವರಿಕೆ ಮಾಡಿಕೊಡಿ.
12. ಅಪರಾಧ ತಡೆ ಮತ್ತು ಪತ್ತೆ ಪೊಲಿಸರಿಗಷ್ಟೇ ಜವಾಬ್ದಾರಿ ಎಂದು ಭಾವಿಸಬೇಡಿ. ನಿಮ್ಮ ಸಹಕಾರ ಕೂಡ ಅತ್ಯಗತ್ಯ ಎಂದು ಜಾಗೃತಿ ಮೂಡಿಸಲಾಯಿತು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…