ದೊಡ್ಡಬಳ್ಳಾಪುರ ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಜನರು ಹೆಚ್ಚಾಗಿ ಸೇರುವ ಬಸ್ ನಿಲ್ದಾಣ, ಮಾರುಕಟ್ಟೆ, ಪಾರ್ಕ್, ದೇವಸ್ಥಾನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಿಗೆ ತೆರಳಿ ಸರಗಳ್ಳರಿಂದ ಪಾರಾಗುವುದು ಹೇಗೆ ಎಂಬುದರ ಬಗ್ಗೆ ಮಹಿಳೆಯರು, ವೃದ್ಧರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.
ಸರಗಳ್ಳತನ ತಡೆಯುವ ಬಗ್ಗೆ ಸಲಹೆಗಳು :
1. ಒಂಟಿಯಾಗಿ ಜನರಿಲ್ಲದ ಪ್ರದೇಶಗಳಲ್ಲಿ ಹೆಂಗಸರು ಓಡಾಡುವುದನ್ನು ತಪ್ಪಿಸಿ.
2. ಒಂಟಿಯಾಗಿ ಓಡಾಡುವಾಗ ಅಪರಿಚಿತ ವ್ಯಕ್ತಿಗಳು ನಿಮ್ಮ ಬಳಿ ನಿಧಾನವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದಾಗ ಅವರ ಕೈಗೆಟಕುವ ಅಂತರದಲ್ಲಿ ನಿಲ್ಲಬೇಡಿ.
3. ಅನುಮಾನಾಸ್ಪದ ವಾಹನಗಳು ನಿಮ್ಮ ಬಳಿ ಬರುವಾಗ ವಾಹನದ ವಿಧ, ಬಣ್ಣ, ನೊಂದಣಿ ಸಂಖ್ಯೆ ವಾಹನ ಸವಾರರು ಧರಿಸಿರುವ ಬಟ್ಟೆ, ಚಹರೆ, ಮುಖದಲ್ಲಿ ಗುರುತಿಸಬಹುದಾದ ಯಾವುದಾದರೂ ವಿಶೇಷತೆಗಳು ಇತ್ಯಾದಿಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ
5. ವಾಯು ವಿಹಾರಕ್ಕೆ ಹೋಗುವ ಸಂದರ್ಭದಲ್ಲಿ ಚಿನ್ನದ ಸರಗಳನ್ನು ಬಟ್ಟೆಯಿಂದ ಮರೆ ಮಾಡಿಕೊಳ್ಳಿ
6. ಸರ ಮತ್ತು ಧರಿಸುವ ಬಟ್ಟೆಗೆ ಹೊಂದಿಸಿ ಸೇಫ್ಟಿ ಪಿನ್ಗಳನ್ನು ಹಾಕಿ.
8. ಮನೆಯಿಂದ ಹೊರಗೆ ಹೋಗುವಾಗ, ಅಂಗಡಿಗೆ ಹೋಗುವಾಗ, ಅಂಗಡಿಯಿಂದ ಸಾಮಾನು ಖರೀದಿಸಿ ಹೊರಡುವಾಗ ಜಾಗ್ರತೆ ಅಗತ್ಯ.
9. ಬೆಳಗಿನ ಸಮುಯದಲ್ಲಿ ದೇವಸ್ಥಾನಕ್ಕೆ, ಅಂಗಡಿಗೆ ಒಂಟಿಯಾಗಿ ಹೋಗುವುದನ್ನು ತಪ್ಪಿಸಿ.
11. ಕತ್ತಲೆ ಪ್ರದೇಶದಲ್ಲಿ ಪವರ್ ಕಟ್ ಆದ ಸಮಯದಲ್ಲಿ ನಡೆದಾಡುವಾಗ ನಿಮ್ಮ ಆಭರಣಗಳ ಕಡೆ ಹೆಚ್ಚಿನ ಗಮನ ವಹಿಸಿ ಹಾಗೂ ನಿಮ್ಮ ಜೊತೆಗಾರರಿಗೂ ಸರಗಳ್ಳತನಗಳ ಬಗ್ಗೆ ಮನವರಿಕೆ ಮಾಡಿಕೊಡಿ.
12. ಅಪರಾಧ ತಡೆ ಮತ್ತು ಪತ್ತೆ ಪೊಲಿಸರಿಗಷ್ಟೇ ಜವಾಬ್ದಾರಿ ಎಂದು ಭಾವಿಸಬೇಡಿ. ನಿಮ್ಮ ಸಹಕಾರ ಕೂಡ ಅತ್ಯಗತ್ಯ ಎಂದು ಜಾಗೃತಿ ಮೂಡಿಸಲಾಯಿತು.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…