ದೊಡ್ಡಬಳ್ಳಾಪುರ ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಜನರು ಹೆಚ್ಚಾಗಿ ಸೇರುವ ಬಸ್ ನಿಲ್ದಾಣ, ಮಾರುಕಟ್ಟೆ, ಪಾರ್ಕ್, ದೇವಸ್ಥಾನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಿಗೆ ತೆರಳಿ ಸರಗಳ್ಳರಿಂದ ಪಾರಾಗುವುದು ಹೇಗೆ ಎಂಬುದರ ಬಗ್ಗೆ ಮಹಿಳೆಯರು, ವೃದ್ಧರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.
ಸರಗಳ್ಳತನ ತಡೆಯುವ ಬಗ್ಗೆ ಸಲಹೆಗಳು :
1. ಒಂಟಿಯಾಗಿ ಜನರಿಲ್ಲದ ಪ್ರದೇಶಗಳಲ್ಲಿ ಹೆಂಗಸರು ಓಡಾಡುವುದನ್ನು ತಪ್ಪಿಸಿ.
2. ಒಂಟಿಯಾಗಿ ಓಡಾಡುವಾಗ ಅಪರಿಚಿತ ವ್ಯಕ್ತಿಗಳು ನಿಮ್ಮ ಬಳಿ ನಿಧಾನವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದಾಗ ಅವರ ಕೈಗೆಟಕುವ ಅಂತರದಲ್ಲಿ ನಿಲ್ಲಬೇಡಿ.
3. ಅನುಮಾನಾಸ್ಪದ ವಾಹನಗಳು ನಿಮ್ಮ ಬಳಿ ಬರುವಾಗ ವಾಹನದ ವಿಧ, ಬಣ್ಣ, ನೊಂದಣಿ ಸಂಖ್ಯೆ ವಾಹನ ಸವಾರರು ಧರಿಸಿರುವ ಬಟ್ಟೆ, ಚಹರೆ, ಮುಖದಲ್ಲಿ ಗುರುತಿಸಬಹುದಾದ ಯಾವುದಾದರೂ ವಿಶೇಷತೆಗಳು ಇತ್ಯಾದಿಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ
5. ವಾಯು ವಿಹಾರಕ್ಕೆ ಹೋಗುವ ಸಂದರ್ಭದಲ್ಲಿ ಚಿನ್ನದ ಸರಗಳನ್ನು ಬಟ್ಟೆಯಿಂದ ಮರೆ ಮಾಡಿಕೊಳ್ಳಿ
6. ಸರ ಮತ್ತು ಧರಿಸುವ ಬಟ್ಟೆಗೆ ಹೊಂದಿಸಿ ಸೇಫ್ಟಿ ಪಿನ್ಗಳನ್ನು ಹಾಕಿ.
8. ಮನೆಯಿಂದ ಹೊರಗೆ ಹೋಗುವಾಗ, ಅಂಗಡಿಗೆ ಹೋಗುವಾಗ, ಅಂಗಡಿಯಿಂದ ಸಾಮಾನು ಖರೀದಿಸಿ ಹೊರಡುವಾಗ ಜಾಗ್ರತೆ ಅಗತ್ಯ.
9. ಬೆಳಗಿನ ಸಮುಯದಲ್ಲಿ ದೇವಸ್ಥಾನಕ್ಕೆ, ಅಂಗಡಿಗೆ ಒಂಟಿಯಾಗಿ ಹೋಗುವುದನ್ನು ತಪ್ಪಿಸಿ.
11. ಕತ್ತಲೆ ಪ್ರದೇಶದಲ್ಲಿ ಪವರ್ ಕಟ್ ಆದ ಸಮಯದಲ್ಲಿ ನಡೆದಾಡುವಾಗ ನಿಮ್ಮ ಆಭರಣಗಳ ಕಡೆ ಹೆಚ್ಚಿನ ಗಮನ ವಹಿಸಿ ಹಾಗೂ ನಿಮ್ಮ ಜೊತೆಗಾರರಿಗೂ ಸರಗಳ್ಳತನಗಳ ಬಗ್ಗೆ ಮನವರಿಕೆ ಮಾಡಿಕೊಡಿ.
12. ಅಪರಾಧ ತಡೆ ಮತ್ತು ಪತ್ತೆ ಪೊಲಿಸರಿಗಷ್ಟೇ ಜವಾಬ್ದಾರಿ ಎಂದು ಭಾವಿಸಬೇಡಿ. ನಿಮ್ಮ ಸಹಕಾರ ಕೂಡ ಅತ್ಯಗತ್ಯ ಎಂದು ಜಾಗೃತಿ ಮೂಡಿಸಲಾಯಿತು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…