ದೊಡ್ಡಬಳ್ಳಾಪುರ ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಜನರು ಹೆಚ್ಚಾಗಿ ಸೇರುವ ಬಸ್ ನಿಲ್ದಾಣ, ಮಾರುಕಟ್ಟೆ, ಪಾರ್ಕ್, ದೇವಸ್ಥಾನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಿಗೆ ತೆರಳಿ ಸರಗಳ್ಳರಿಂದ ಪಾರಾಗುವುದು ಹೇಗೆ ಎಂಬುದರ ಬಗ್ಗೆ ಮಹಿಳೆಯರು, ವೃದ್ಧರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.
ಸರಗಳ್ಳತನ ತಡೆಯುವ ಬಗ್ಗೆ ಸಲಹೆಗಳು :
1. ಒಂಟಿಯಾಗಿ ಜನರಿಲ್ಲದ ಪ್ರದೇಶಗಳಲ್ಲಿ ಹೆಂಗಸರು ಓಡಾಡುವುದನ್ನು ತಪ್ಪಿಸಿ.
2. ಒಂಟಿಯಾಗಿ ಓಡಾಡುವಾಗ ಅಪರಿಚಿತ ವ್ಯಕ್ತಿಗಳು ನಿಮ್ಮ ಬಳಿ ನಿಧಾನವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದಾಗ ಅವರ ಕೈಗೆಟಕುವ ಅಂತರದಲ್ಲಿ ನಿಲ್ಲಬೇಡಿ.
3. ಅನುಮಾನಾಸ್ಪದ ವಾಹನಗಳು ನಿಮ್ಮ ಬಳಿ ಬರುವಾಗ ವಾಹನದ ವಿಧ, ಬಣ್ಣ, ನೊಂದಣಿ ಸಂಖ್ಯೆ ವಾಹನ ಸವಾರರು ಧರಿಸಿರುವ ಬಟ್ಟೆ, ಚಹರೆ, ಮುಖದಲ್ಲಿ ಗುರುತಿಸಬಹುದಾದ ಯಾವುದಾದರೂ ವಿಶೇಷತೆಗಳು ಇತ್ಯಾದಿಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ
5. ವಾಯು ವಿಹಾರಕ್ಕೆ ಹೋಗುವ ಸಂದರ್ಭದಲ್ಲಿ ಚಿನ್ನದ ಸರಗಳನ್ನು ಬಟ್ಟೆಯಿಂದ ಮರೆ ಮಾಡಿಕೊಳ್ಳಿ
6. ಸರ ಮತ್ತು ಧರಿಸುವ ಬಟ್ಟೆಗೆ ಹೊಂದಿಸಿ ಸೇಫ್ಟಿ ಪಿನ್ಗಳನ್ನು ಹಾಕಿ.
8. ಮನೆಯಿಂದ ಹೊರಗೆ ಹೋಗುವಾಗ, ಅಂಗಡಿಗೆ ಹೋಗುವಾಗ, ಅಂಗಡಿಯಿಂದ ಸಾಮಾನು ಖರೀದಿಸಿ ಹೊರಡುವಾಗ ಜಾಗ್ರತೆ ಅಗತ್ಯ.
9. ಬೆಳಗಿನ ಸಮುಯದಲ್ಲಿ ದೇವಸ್ಥಾನಕ್ಕೆ, ಅಂಗಡಿಗೆ ಒಂಟಿಯಾಗಿ ಹೋಗುವುದನ್ನು ತಪ್ಪಿಸಿ.
11. ಕತ್ತಲೆ ಪ್ರದೇಶದಲ್ಲಿ ಪವರ್ ಕಟ್ ಆದ ಸಮಯದಲ್ಲಿ ನಡೆದಾಡುವಾಗ ನಿಮ್ಮ ಆಭರಣಗಳ ಕಡೆ ಹೆಚ್ಚಿನ ಗಮನ ವಹಿಸಿ ಹಾಗೂ ನಿಮ್ಮ ಜೊತೆಗಾರರಿಗೂ ಸರಗಳ್ಳತನಗಳ ಬಗ್ಗೆ ಮನವರಿಕೆ ಮಾಡಿಕೊಡಿ.
12. ಅಪರಾಧ ತಡೆ ಮತ್ತು ಪತ್ತೆ ಪೊಲಿಸರಿಗಷ್ಟೇ ಜವಾಬ್ದಾರಿ ಎಂದು ಭಾವಿಸಬೇಡಿ. ನಿಮ್ಮ ಸಹಕಾರ ಕೂಡ ಅತ್ಯಗತ್ಯ ಎಂದು ಜಾಗೃತಿ ಮೂಡಿಸಲಾಯಿತು.
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…