ದೊಡ್ಡಬಳ್ಳಾಪುರ ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಜನರು ಹೆಚ್ಚಾಗಿ ಸೇರುವ ಬಸ್ ನಿಲ್ದಾಣ, ಮಾರುಕಟ್ಟೆ, ಪಾರ್ಕ್, ದೇವಸ್ಥಾನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಿಗೆ ತೆರಳಿ ಸರಗಳ್ಳರಿಂದ ಪಾರಾಗುವುದು ಹೇಗೆ ಎಂಬುದರ ಬಗ್ಗೆ ಮಹಿಳೆಯರು, ವೃದ್ಧರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.
ಸರಗಳ್ಳತನ ತಡೆಯುವ ಬಗ್ಗೆ ಸಲಹೆಗಳು :
1. ಒಂಟಿಯಾಗಿ ಜನರಿಲ್ಲದ ಪ್ರದೇಶಗಳಲ್ಲಿ ಹೆಂಗಸರು ಓಡಾಡುವುದನ್ನು ತಪ್ಪಿಸಿ.
2. ಒಂಟಿಯಾಗಿ ಓಡಾಡುವಾಗ ಅಪರಿಚಿತ ವ್ಯಕ್ತಿಗಳು ನಿಮ್ಮ ಬಳಿ ನಿಧಾನವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದಾಗ ಅವರ ಕೈಗೆಟಕುವ ಅಂತರದಲ್ಲಿ ನಿಲ್ಲಬೇಡಿ.
3. ಅನುಮಾನಾಸ್ಪದ ವಾಹನಗಳು ನಿಮ್ಮ ಬಳಿ ಬರುವಾಗ ವಾಹನದ ವಿಧ, ಬಣ್ಣ, ನೊಂದಣಿ ಸಂಖ್ಯೆ ವಾಹನ ಸವಾರರು ಧರಿಸಿರುವ ಬಟ್ಟೆ, ಚಹರೆ, ಮುಖದಲ್ಲಿ ಗುರುತಿಸಬಹುದಾದ ಯಾವುದಾದರೂ ವಿಶೇಷತೆಗಳು ಇತ್ಯಾದಿಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ
5. ವಾಯು ವಿಹಾರಕ್ಕೆ ಹೋಗುವ ಸಂದರ್ಭದಲ್ಲಿ ಚಿನ್ನದ ಸರಗಳನ್ನು ಬಟ್ಟೆಯಿಂದ ಮರೆ ಮಾಡಿಕೊಳ್ಳಿ
6. ಸರ ಮತ್ತು ಧರಿಸುವ ಬಟ್ಟೆಗೆ ಹೊಂದಿಸಿ ಸೇಫ್ಟಿ ಪಿನ್ಗಳನ್ನು ಹಾಕಿ.
8. ಮನೆಯಿಂದ ಹೊರಗೆ ಹೋಗುವಾಗ, ಅಂಗಡಿಗೆ ಹೋಗುವಾಗ, ಅಂಗಡಿಯಿಂದ ಸಾಮಾನು ಖರೀದಿಸಿ ಹೊರಡುವಾಗ ಜಾಗ್ರತೆ ಅಗತ್ಯ.
9. ಬೆಳಗಿನ ಸಮುಯದಲ್ಲಿ ದೇವಸ್ಥಾನಕ್ಕೆ, ಅಂಗಡಿಗೆ ಒಂಟಿಯಾಗಿ ಹೋಗುವುದನ್ನು ತಪ್ಪಿಸಿ.
11. ಕತ್ತಲೆ ಪ್ರದೇಶದಲ್ಲಿ ಪವರ್ ಕಟ್ ಆದ ಸಮಯದಲ್ಲಿ ನಡೆದಾಡುವಾಗ ನಿಮ್ಮ ಆಭರಣಗಳ ಕಡೆ ಹೆಚ್ಚಿನ ಗಮನ ವಹಿಸಿ ಹಾಗೂ ನಿಮ್ಮ ಜೊತೆಗಾರರಿಗೂ ಸರಗಳ್ಳತನಗಳ ಬಗ್ಗೆ ಮನವರಿಕೆ ಮಾಡಿಕೊಡಿ.
12. ಅಪರಾಧ ತಡೆ ಮತ್ತು ಪತ್ತೆ ಪೊಲಿಸರಿಗಷ್ಟೇ ಜವಾಬ್ದಾರಿ ಎಂದು ಭಾವಿಸಬೇಡಿ. ನಿಮ್ಮ ಸಹಕಾರ ಕೂಡ ಅತ್ಯಗತ್ಯ ಎಂದು ಜಾಗೃತಿ ಮೂಡಿಸಲಾಯಿತು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…