ದೊಡ್ಡಬಳ್ಳಾಪುರದಲ್ಲಿ ಹೆಚ್ಚಾದ ಕಳ್ಳರ ಕೈಚಳಕ: ಮನೆ, ಅಂಗಡಿಗಳಿಗೆ ನುಗ್ಗಿ ಕನ್ನ: ಕಳೆದ ರಾತ್ರಿ ಮನೆ ಬಾಗಿಲು ಮುರಿದು ದೇವರ ಮನೆಯಲ್ಲಿದ್ದ ನಗದು ದೋಚಿ ಖದೀಮರು ಎಸ್ಕೇಪ್

ಮನೆಗಳಿಗೆ ಕನ್ನ ಹಾಕಲು ಹೊಂಚಾಕಿ‌ ಕುಳಿತ್ತಿದ್ದ ಕಳ್ಳರು, ಕಳೆದ ರಾತ್ರಿ ಸುಮಾರು 9:15ರ‌ ಸಮಯದಲ್ಲಿ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಮನೆ ಬಳಿ ಹೋಗಿ, ಬಾಗಿಲು ಮುರಿದು ದೇವರ ಮನೆಯಲ್ಲಿದ್ದ ಸುಮಾರು 80 ಸಾವಿರ ನಗದು ದೋಚಿ ಎಸ್ಕೇಪ್ ಆಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಪಾಲನಜೋಗಿಹಳ್ಳಿ ರಸ್ತೆಯ ಎಪಿಎಂಸಿ ವೆಸ್ಟ್ ಗೇಟ್ ಎದುರಿನ ಸುಭಾಷ್ ನಗರದಲ್ಲಿರುವ ಮನೆಯಲ್ಲಿ ನಡೆದಿದೆ….

ಅರುಣ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ…. ಅರುಣ್ ರವರು ವರಮಹಾಲಕ್ಷ್ಮಿ ಹಬ್ಬದಂದು ದೇವರ ಮನೆಯಲ್ಲಿ ವರಲಕ್ಷ್ಮಿ ಪೂಜೆ ಮಾಡಿ‌ ದೇವರ ಬಳಿ ಸುಮಾರು 80 ಸಾವಿರ ಇಟ್ಟಿದ್ದರು, ಹಬ್ಬ ಮುಗಿದು ಹಲವು ದಿನಗಳಾದರೂ ಈ ಹಣವನ್ನು ತೆಗೆದುಕೊಳ್ಳದೇ ದೇವರ ಮನೆಯಲ್ಲಿ ಹಾಗೇ ಬಿಟ್ಟಿದ್ದರು. ಇದೀಗ ಕಳ್ಳರ ಪಾಲಾಗಿದೆ….

ಕಳ್ಳರ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಕಂಡುಬಂದಿದೆ…

ನನ್ನ ತಂದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ನಂತರ ಆಸ್ಪತ್ರೆಯಿಂದ ಮತ್ತೆ ಮನೆಗೆ ಬಂದು ಬಟ್ಟೆ ಬದಲಾಯಿಸಿಕೊಂಡು ಊಟ ಮಾಡಿಕೊಂಡು ಬರಲು ಹೆಂಡತಿ ಮನೆಗೆ ಹೋಗಿದ್ದೆ. ಊಟ ಮಾಡಿಕೊಂಡು ರಾತ್ರಿ ಸುಮಾರು 9:30ರಲ್ಲಿ ಮನೆಗೆ ವಾಪಸ್ ಬಂದು ನೋಡುವಷ್ಟರಲ್ಲಿ ಮನೆ ಬಾಗಿಲು ಮುರಿದಿತ್ತು, ಕಿಟಿಕಿ ಗಾಜಿಗೆ ಕಲ್ಲು ಬಿದ್ದು, ಕಿಟಕಿ ಗಾಜುಗಳು ಕೆಳಗೆ ಬಿದ್ದಿತ್ತು, ದೇವರ ಮನೆಯಲ್ಲಿದ್ದ 80 ಸಾವಿರ ನಗದು ದೋಚಿದ ಕಳ್ಳರು ಎಸ್ಕೇಪ್ ಆಗಿದ್ದಾರೆ ಎಂದು ಅರುಣ್ ಹೇಳಿದ್ದಾರೆ.

ಇತ್ತೀಚೆಗೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಂಗಡಿ ಕಳ್ಳರ ಕಾಟ ಹೆಚ್ಚಾಗಿದೆ. ಕಳೆದ ಶುಕ್ರವಾರ ರಾತ್ರಿಯಷ್ಟೇ ನಗರದ ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಫರ್ನೀಚರ್ಸ್ ಹಾಗೂ ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ಯತ್ನ ನಡೆದಿತ್ತು. ಬುಧವಾರದಂದು ತೂಬಗೆರೆ ಗ್ರಾಮದ ಎರಡು ದಿನಸಿ ಅಂಗಡಿಗಳಲ್ಲಿ ಕಳ್ಳರ ಕೈಚಳಕ ಕಂಡುಬಂದಿತ್ತು. ಅದೇ ದಿನ ಹಾಡೋನಹಳ್ಳಿಯಲ್ಲಿ ಎರಡು ಮೇಕೆ ಹೋತಗಳನ್ನು ಕದ್ದಿದ್ದರು. ಇದೀಗ ಮನಗೆ ಕನ್ನ ಹಾಕಿದ್ದಾರೆ….

ಕಳ್ಳರ ಕಾಟದಿಂದ ದೊಡ್ಡಬಳ್ಳಾಪುರ ಜನತೆ ಕಂಗಾಲಾಗಿದ್ದಾರೆ. ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು. ಕೂಡಲೇ ಕಳ್ಳರ ಜಾಡು ಹಿಡಿದು ಬಂಧಿಸಿ, ಇನ್ನುಮುಂದೆ ಯಾವುದೇ ಕಳ್ಳತನದ ಕೃತ್ಯಗಳು ಮರುಕಳಿಸದಂತೆ ಎಚ್ವರವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ…

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

9 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

15 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

21 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

22 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago