ಮನೆಗಳಿಗೆ ಕನ್ನ ಹಾಕಲು ಹೊಂಚಾಕಿ ಕುಳಿತ್ತಿದ್ದ ಕಳ್ಳರು, ಕಳೆದ ರಾತ್ರಿ ಸುಮಾರು 9:15ರ ಸಮಯದಲ್ಲಿ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಮನೆ ಬಳಿ ಹೋಗಿ, ಬಾಗಿಲು ಮುರಿದು ದೇವರ ಮನೆಯಲ್ಲಿದ್ದ ಸುಮಾರು 80 ಸಾವಿರ ನಗದು ದೋಚಿ ಎಸ್ಕೇಪ್ ಆಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಪಾಲನಜೋಗಿಹಳ್ಳಿ ರಸ್ತೆಯ ಎಪಿಎಂಸಿ ವೆಸ್ಟ್ ಗೇಟ್ ಎದುರಿನ ಸುಭಾಷ್ ನಗರದಲ್ಲಿರುವ ಮನೆಯಲ್ಲಿ ನಡೆದಿದೆ….
ಅರುಣ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ…. ಅರುಣ್ ರವರು ವರಮಹಾಲಕ್ಷ್ಮಿ ಹಬ್ಬದಂದು ದೇವರ ಮನೆಯಲ್ಲಿ ವರಲಕ್ಷ್ಮಿ ಪೂಜೆ ಮಾಡಿ ದೇವರ ಬಳಿ ಸುಮಾರು 80 ಸಾವಿರ ಇಟ್ಟಿದ್ದರು, ಹಬ್ಬ ಮುಗಿದು ಹಲವು ದಿನಗಳಾದರೂ ಈ ಹಣವನ್ನು ತೆಗೆದುಕೊಳ್ಳದೇ ದೇವರ ಮನೆಯಲ್ಲಿ ಹಾಗೇ ಬಿಟ್ಟಿದ್ದರು. ಇದೀಗ ಕಳ್ಳರ ಪಾಲಾಗಿದೆ….
ಕಳ್ಳರ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಕಂಡುಬಂದಿದೆ…
ನನ್ನ ತಂದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ನಂತರ ಆಸ್ಪತ್ರೆಯಿಂದ ಮತ್ತೆ ಮನೆಗೆ ಬಂದು ಬಟ್ಟೆ ಬದಲಾಯಿಸಿಕೊಂಡು ಊಟ ಮಾಡಿಕೊಂಡು ಬರಲು ಹೆಂಡತಿ ಮನೆಗೆ ಹೋಗಿದ್ದೆ. ಊಟ ಮಾಡಿಕೊಂಡು ರಾತ್ರಿ ಸುಮಾರು 9:30ರಲ್ಲಿ ಮನೆಗೆ ವಾಪಸ್ ಬಂದು ನೋಡುವಷ್ಟರಲ್ಲಿ ಮನೆ ಬಾಗಿಲು ಮುರಿದಿತ್ತು, ಕಿಟಿಕಿ ಗಾಜಿಗೆ ಕಲ್ಲು ಬಿದ್ದು, ಕಿಟಕಿ ಗಾಜುಗಳು ಕೆಳಗೆ ಬಿದ್ದಿತ್ತು, ದೇವರ ಮನೆಯಲ್ಲಿದ್ದ 80 ಸಾವಿರ ನಗದು ದೋಚಿದ ಕಳ್ಳರು ಎಸ್ಕೇಪ್ ಆಗಿದ್ದಾರೆ ಎಂದು ಅರುಣ್ ಹೇಳಿದ್ದಾರೆ.
ಇತ್ತೀಚೆಗೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಂಗಡಿ ಕಳ್ಳರ ಕಾಟ ಹೆಚ್ಚಾಗಿದೆ. ಕಳೆದ ಶುಕ್ರವಾರ ರಾತ್ರಿಯಷ್ಟೇ ನಗರದ ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಫರ್ನೀಚರ್ಸ್ ಹಾಗೂ ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ಯತ್ನ ನಡೆದಿತ್ತು. ಬುಧವಾರದಂದು ತೂಬಗೆರೆ ಗ್ರಾಮದ ಎರಡು ದಿನಸಿ ಅಂಗಡಿಗಳಲ್ಲಿ ಕಳ್ಳರ ಕೈಚಳಕ ಕಂಡುಬಂದಿತ್ತು. ಅದೇ ದಿನ ಹಾಡೋನಹಳ್ಳಿಯಲ್ಲಿ ಎರಡು ಮೇಕೆ ಹೋತಗಳನ್ನು ಕದ್ದಿದ್ದರು. ಇದೀಗ ಮನಗೆ ಕನ್ನ ಹಾಕಿದ್ದಾರೆ….
ಕಳ್ಳರ ಕಾಟದಿಂದ ದೊಡ್ಡಬಳ್ಳಾಪುರ ಜನತೆ ಕಂಗಾಲಾಗಿದ್ದಾರೆ. ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕು. ಕೂಡಲೇ ಕಳ್ಳರ ಜಾಡು ಹಿಡಿದು ಬಂಧಿಸಿ, ಇನ್ನುಮುಂದೆ ಯಾವುದೇ ಕಳ್ಳತನದ ಕೃತ್ಯಗಳು ಮರುಕಳಿಸದಂತೆ ಎಚ್ವರವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…