ದೊಡ್ಡಬಳ್ಳಾಪುರದಲ್ಲಿ ಹೈಟೆಕ್ ಮೀನುಗಾರರ ಮಾರುಕಟ್ಟೆ ಶೀಘ್ರ ಆರಂಭ- ಮಂಜುನಾಥ್ ಸುಣಗಾರ್

ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಮೀನುಗಾರರ ಘಟಕದ ರಾಜ್ಯಾಧ್ಯಕ್ಷ ಮಂಜುನಾಥ್ ಸುಣಗಾರ್ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡಬಳ್ಳಾಪುರ ನಗರದಲ್ಲಿ ಶೀಘ್ರದಲ್ಲೇ ಹೈಟೆಕ್ ಮೀನುಗಾರರ ಮಾರುಕಟ್ಟೆ ಆರಂಭಿಸಲು ತೀರ್ಮಾನಿಸಲಾಗಿದ್ದು, ಜೊತೆಗೆ ಮೀನು ಹೋಟೆಲ್ ತೆರೆಯುವ ಯೋಜನೆಯೂ ರೂಪಿಸಲಾಗಿದೆ ಎಂದು ಹೇಳಿದರು.

ಮಳೆ ಕೊರತೆಯಿಂದಾಗಿ ಮೀನುಗಾರರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದು, ಈ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು ಮೀನುಗಾರರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೈಗಾರಿಕೆಗಳಿಂದ ಹೊರಬರುವ ರಾಸಾಯನಿಕಯುಕ್ತ ನೀರು ಕೆರೆಗಳಿಗೆ ಸೇರಿ ನೀರು ಕಲುಷಿತವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದರಿಂದ ಮೀನುಗಳು ಸಾವನ್ನಪ್ಪುತ್ತಿರುವ ಘಟನೆಗಳು ವರದಿಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ. ಮಹೇಶ್ ಕುಮಾರ್, ಮೀನುಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ಮಂಜುನಾಥ್ ಸುಣಗಾರ್ ಅವರು ನಿರಂತರವಾಗಿ ಶ್ರಮಿಸುತ್ತಿದ್ದು, ಸರ್ಕಾರದ ವಿವಿಧ ಸೌಲಭ್ಯಗಳನ್ನು ಮೀನುಗಾರರಿಗೆ ನೇರವಾಗಿ ತಲುಪಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಸರ್ಕಾರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ನಗರಸಭಾ ಸದಸ್ಯ ಕಾಂತರಾಜ್ ಸೇರಿದಂತೆ ಮೀನುಗಾರರ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

6 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

12 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

13 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

1 day ago