ದೊಡ್ಡಬಳ್ಳಾಪುರದ ಕೆ.ಎಂ ನಂಜುಂಡೇಶ್ವರ ನಿರ್ಮಾಣದ ಶ್ರೀ ಮಾರಮ್ಮ ದೇವಿ ಕುರಿತ ಭಕ್ತಿಪ್ರಧಾನ ಕಥೆ ಆಧರಿಸಿದ ‘ಸಿಂಹರೂಪಿಣಿ’ ಸಿನಿಮಾ ಅ.17ಕ್ಕೆ ಬಿಡುಗಡೆ

ಕಿನ್ನಾಳ್‌ ರಾಜ್ ನಿರ್ದೇಶನದ ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಆಧರಿಸಿದ ‘ಸಿಂಹರೂಪಿಣಿ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ಅ. 17ರಂದು ರಾಜ್ಯಾದ್ಯಂತ ಹಲವು ಚಿತ್ರ ಮಂದಿರಗಳಲ್ಲಿ ತೆರೆಕಾಣಲಿದೆ.

ಭಕ್ತಿ ಪ್ರಧಾನ ಚಿತ್ರಕ್ಕೆ ಕಿನ್ನಾಳ್‌ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ನಿರ್ದೇಶನ ಮಾಡಿದ್ದು, ದೊಡ್ಡಬಳ್ಳಾಪುರದ ಕೆ.ಎಂ. ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಿಂಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಆಕಾಶ್‌ಪರ್ವ ಸಂಗೀತ, ಕಿರಣ್‌ಕುಮಾ‌ರ್ ಛಾಯಾಗ್ರಹಣ, ವೆಂಕಿ.ಯು.ವಿ ಸಂಕಲನ, ಕಿಶೋ‌ರ್ ಕಲರಿಸ್ಟ್, ಸಾಹಸ ಗ್ರಿಲ್ಲರ್‌ಮಂಜು-ಚಂದ್ರು ಬಂಡೆ- ಮಂಜುನಾಗಪ್ಪ, ಸೌಂಡ್ ಎಫೆಕ್ಟ್ ನಂದು.ಜೆ ಇವರುಗಳ ಶ್ರಮದಿಂದ ಈ ಚಿತ್ರ ಮೂಡಿಬಂದಿದೆ.

ನಟ ಸುಮನ್, ಯಶ್‌ ಶೆಟ್ಟಿ, ಅಂಕಿತಾ ಗೌಡ, ಯಶಸ್ವಿನಿ, ಹರೀಶ್ ರಾಯ್, ನೀನಾಸಂ ಅಶ್ವತ್ಥ್​, ದಿವ್ಯಾ ಆಲೂರು, ವಿಜಯ್‌ ಚೆಂಡೂರು, ಖುಷಿ ಬಸ್ರೂರು ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಹಿರಿಯ ಕಲಾವಿದರು ಸೇರಿದಂತೆ 120ಕ್ಕೂ ಹೆಚ್ಚು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಈ ಸಿನಿಮಾದಲ್ಲಿ ಇದೆ. ಬಹಳ ವರ್ಷಗಳ ನಂತರ ಮತ್ತೊಮ್ಮೆ ದೇವಿ ಶಕ್ತಿ, ಪವಾಡ, ಭಕ್ತವೃಂದ ಕಥಾನಕವನ್ನು ಬೆಳ್ಳಿ ಪರದೆ ಮೇಲೆ ನೋಡುವ ಅವಕಾಶ ಒದಗಿ ಬಂದಿದೆ. ಪ್ರೇಕ್ಷಕರು ಅಮ್ಮನ ಮಕ್ಕಳಾಗಿ ಚಿತ್ರಮಂದಿರಕ್ಕೆ ಬರಬೇಕು ಎಂದು ನಿರ್ಮಾಪಕ ಕೆ.ಎಂ. ನಂಜುಡೇಶ್ವರ ಹೇಳಿದ್ದಾರೆ.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದಲ್ಲಿ ಏನೇ ಕಷ್ಟ ಬಂದರೂ ಜನರು ದೇವರಿಗೆ ಮೊರೆ ಹೋಗುತ್ತಾರೆ. ಜಾತ್ರೆ, ಉತ್ಸವದಲ್ಲಿ ಇನ್ನೂ ನಂಬಿಕೆ ಉಳಿದಿದೆ ಎಂಬಂತಹ ವಿಷಯಗಳನ್ನು ಪಾತ್ರಗಳ ಮೂಲಕ ತೋರಿಸುತ್ತಿದ್ದೇವೆ. ಎಲ್ಲ ದೇವರಿಗೂ ಹಿನ್ನೆಲೆ ಇರುತ್ತದೆ. ಅದೇ ರೀತಿ, ದೇವಿಯು ಮಹಾಲಕ್ಷೀ ರೂಪದಲ್ಲಿ ಭೂಮಿಗೆ ಬಂದು, ನಂತರ ಮಾರಮ್ಮ ಆಗುತ್ತಾಳೆ. ರಾಕ್ಷಸರ ಸಂಹಾರಕ್ಕೆ ಪಾರ್ವತಿದೇವಿ 7 ಅವತಾರದಲ್ಲಿ ಬರುತ್ತಾಳೆ. ಅದರಲ್ಲಿ ಕೊನೆಯ ಅವತಾರವೇ ಮಾರಮ್ಮ ದೇವಿ. ಇವುಗಳ ಜತೆಗೆ ಒಂದಷ್ಟು ಕಮರ್ಷಿಯಲ್ ಅಂಶಗಳನ್ನೂ ಸೇರಿಸಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.

ಈ ವೇಳೆ ಸಿ.ವಿ ಶ್ರಿನಿವಾಸ್, ಸಾಗರ್ ಗೌಡ, ಯಶಸ್ವಿನಿ ಸಿದ್ದೇಗೌಡ, ಪಿಳ್ಳಪ್ಪ, ಕೆಂಪರಾಜು, ಸಿ.ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

36 minutes ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

2 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

3 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

5 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

6 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

17 hours ago