ದೊಡ್ಡಬಳ್ಳಾಪುರದ ಕೆ.ಎಂ ನಂಜುಂಡೇಶ್ವರ ನಿರ್ಮಾಣದ ಶ್ರೀ ಮಾರಮ್ಮ ದೇವಿ ಕುರಿತ ಭಕ್ತಿಪ್ರಧಾನ ಕಥೆ ಆಧರಿಸಿದ ‘ಸಿಂಹರೂಪಿಣಿ’ ಸಿನಿಮಾ ಅ.17ಕ್ಕೆ ಬಿಡುಗಡೆ

ಕಿನ್ನಾಳ್‌ ರಾಜ್ ನಿರ್ದೇಶನದ ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಆಧರಿಸಿದ ‘ಸಿಂಹರೂಪಿಣಿ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ಅ. 17ರಂದು ರಾಜ್ಯಾದ್ಯಂತ ಹಲವು ಚಿತ್ರ ಮಂದಿರಗಳಲ್ಲಿ ತೆರೆಕಾಣಲಿದೆ.

ಭಕ್ತಿ ಪ್ರಧಾನ ಚಿತ್ರಕ್ಕೆ ಕಿನ್ನಾಳ್‌ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ನಿರ್ದೇಶನ ಮಾಡಿದ್ದು, ದೊಡ್ಡಬಳ್ಳಾಪುರದ ಕೆ.ಎಂ. ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಿಂಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಆಕಾಶ್‌ಪರ್ವ ಸಂಗೀತ, ಕಿರಣ್‌ಕುಮಾ‌ರ್ ಛಾಯಾಗ್ರಹಣ, ವೆಂಕಿ.ಯು.ವಿ ಸಂಕಲನ, ಕಿಶೋ‌ರ್ ಕಲರಿಸ್ಟ್, ಸಾಹಸ ಗ್ರಿಲ್ಲರ್‌ಮಂಜು-ಚಂದ್ರು ಬಂಡೆ- ಮಂಜುನಾಗಪ್ಪ, ಸೌಂಡ್ ಎಫೆಕ್ಟ್ ನಂದು.ಜೆ ಇವರುಗಳ ಶ್ರಮದಿಂದ ಈ ಚಿತ್ರ ಮೂಡಿಬಂದಿದೆ.

ನಟ ಸುಮನ್, ಯಶ್‌ ಶೆಟ್ಟಿ, ಅಂಕಿತಾ ಗೌಡ, ಯಶಸ್ವಿನಿ, ಹರೀಶ್ ರಾಯ್, ನೀನಾಸಂ ಅಶ್ವತ್ಥ್​, ದಿವ್ಯಾ ಆಲೂರು, ವಿಜಯ್‌ ಚೆಂಡೂರು, ಖುಷಿ ಬಸ್ರೂರು ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಹಿರಿಯ ಕಲಾವಿದರು ಸೇರಿದಂತೆ 120ಕ್ಕೂ ಹೆಚ್ಚು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಈ ಸಿನಿಮಾದಲ್ಲಿ ಇದೆ. ಬಹಳ ವರ್ಷಗಳ ನಂತರ ಮತ್ತೊಮ್ಮೆ ದೇವಿ ಶಕ್ತಿ, ಪವಾಡ, ಭಕ್ತವೃಂದ ಕಥಾನಕವನ್ನು ಬೆಳ್ಳಿ ಪರದೆ ಮೇಲೆ ನೋಡುವ ಅವಕಾಶ ಒದಗಿ ಬಂದಿದೆ. ಪ್ರೇಕ್ಷಕರು ಅಮ್ಮನ ಮಕ್ಕಳಾಗಿ ಚಿತ್ರಮಂದಿರಕ್ಕೆ ಬರಬೇಕು ಎಂದು ನಿರ್ಮಾಪಕ ಕೆ.ಎಂ. ನಂಜುಡೇಶ್ವರ ಹೇಳಿದ್ದಾರೆ.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದಲ್ಲಿ ಏನೇ ಕಷ್ಟ ಬಂದರೂ ಜನರು ದೇವರಿಗೆ ಮೊರೆ ಹೋಗುತ್ತಾರೆ. ಜಾತ್ರೆ, ಉತ್ಸವದಲ್ಲಿ ಇನ್ನೂ ನಂಬಿಕೆ ಉಳಿದಿದೆ ಎಂಬಂತಹ ವಿಷಯಗಳನ್ನು ಪಾತ್ರಗಳ ಮೂಲಕ ತೋರಿಸುತ್ತಿದ್ದೇವೆ. ಎಲ್ಲ ದೇವರಿಗೂ ಹಿನ್ನೆಲೆ ಇರುತ್ತದೆ. ಅದೇ ರೀತಿ, ದೇವಿಯು ಮಹಾಲಕ್ಷೀ ರೂಪದಲ್ಲಿ ಭೂಮಿಗೆ ಬಂದು, ನಂತರ ಮಾರಮ್ಮ ಆಗುತ್ತಾಳೆ. ರಾಕ್ಷಸರ ಸಂಹಾರಕ್ಕೆ ಪಾರ್ವತಿದೇವಿ 7 ಅವತಾರದಲ್ಲಿ ಬರುತ್ತಾಳೆ. ಅದರಲ್ಲಿ ಕೊನೆಯ ಅವತಾರವೇ ಮಾರಮ್ಮ ದೇವಿ. ಇವುಗಳ ಜತೆಗೆ ಒಂದಷ್ಟು ಕಮರ್ಷಿಯಲ್ ಅಂಶಗಳನ್ನೂ ಸೇರಿಸಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.

ಈ ವೇಳೆ ಸಿ.ವಿ ಶ್ರಿನಿವಾಸ್, ಸಾಗರ್ ಗೌಡ, ಯಶಸ್ವಿನಿ ಸಿದ್ದೇಗೌಡ, ಪಿಳ್ಳಪ್ಪ, ಕೆಂಪರಾಜು, ಸಿ.ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

6 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

6 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

9 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

20 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

22 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

1 day ago