ಕಿನ್ನಾಳ್ ರಾಜ್ ನಿರ್ದೇಶನದ ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಆಧರಿಸಿದ ‘ಸಿಂಹರೂಪಿಣಿ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ಅ. 17ರಂದು ರಾಜ್ಯಾದ್ಯಂತ ಹಲವು ಚಿತ್ರ ಮಂದಿರಗಳಲ್ಲಿ ತೆರೆಕಾಣಲಿದೆ.
ಭಕ್ತಿ ಪ್ರಧಾನ ಚಿತ್ರಕ್ಕೆ ಕಿನ್ನಾಳ್ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ನಿರ್ದೇಶನ ಮಾಡಿದ್ದು, ದೊಡ್ಡಬಳ್ಳಾಪುರದ ಕೆ.ಎಂ. ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಿಂಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಆಕಾಶ್ಪರ್ವ ಸಂಗೀತ, ಕಿರಣ್ಕುಮಾರ್ ಛಾಯಾಗ್ರಹಣ, ವೆಂಕಿ.ಯು.ವಿ ಸಂಕಲನ, ಕಿಶೋರ್ ಕಲರಿಸ್ಟ್, ಸಾಹಸ ಗ್ರಿಲ್ಲರ್ಮಂಜು-ಚಂದ್ರು ಬಂಡೆ- ಮಂಜುನಾಗಪ್ಪ, ಸೌಂಡ್ ಎಫೆಕ್ಟ್ ನಂದು.ಜೆ ಇವರುಗಳ ಶ್ರಮದಿಂದ ಈ ಚಿತ್ರ ಮೂಡಿಬಂದಿದೆ.
ನಟ ಸುಮನ್, ಯಶ್ ಶೆಟ್ಟಿ, ಅಂಕಿತಾ ಗೌಡ, ಯಶಸ್ವಿನಿ, ಹರೀಶ್ ರಾಯ್, ನೀನಾಸಂ ಅಶ್ವತ್ಥ್, ದಿವ್ಯಾ ಆಲೂರು, ವಿಜಯ್ ಚೆಂಡೂರು, ಖುಷಿ ಬಸ್ರೂರು ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಹಿರಿಯ ಕಲಾವಿದರು ಸೇರಿದಂತೆ 120ಕ್ಕೂ ಹೆಚ್ಚು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.
ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಈ ಸಿನಿಮಾದಲ್ಲಿ ಇದೆ. ಬಹಳ ವರ್ಷಗಳ ನಂತರ ಮತ್ತೊಮ್ಮೆ ದೇವಿ ಶಕ್ತಿ, ಪವಾಡ, ಭಕ್ತವೃಂದ ಕಥಾನಕವನ್ನು ಬೆಳ್ಳಿ ಪರದೆ ಮೇಲೆ ನೋಡುವ ಅವಕಾಶ ಒದಗಿ ಬಂದಿದೆ. ಪ್ರೇಕ್ಷಕರು ಅಮ್ಮನ ಮಕ್ಕಳಾಗಿ ಚಿತ್ರಮಂದಿರಕ್ಕೆ ಬರಬೇಕು ಎಂದು ನಿರ್ಮಾಪಕ ಕೆ.ಎಂ. ನಂಜುಡೇಶ್ವರ ಹೇಳಿದ್ದಾರೆ.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದಲ್ಲಿ ಏನೇ ಕಷ್ಟ ಬಂದರೂ ಜನರು ದೇವರಿಗೆ ಮೊರೆ ಹೋಗುತ್ತಾರೆ. ಜಾತ್ರೆ, ಉತ್ಸವದಲ್ಲಿ ಇನ್ನೂ ನಂಬಿಕೆ ಉಳಿದಿದೆ ಎಂಬಂತಹ ವಿಷಯಗಳನ್ನು ಪಾತ್ರಗಳ ಮೂಲಕ ತೋರಿಸುತ್ತಿದ್ದೇವೆ. ಎಲ್ಲ ದೇವರಿಗೂ ಹಿನ್ನೆಲೆ ಇರುತ್ತದೆ. ಅದೇ ರೀತಿ, ದೇವಿಯು ಮಹಾಲಕ್ಷೀ ರೂಪದಲ್ಲಿ ಭೂಮಿಗೆ ಬಂದು, ನಂತರ ಮಾರಮ್ಮ ಆಗುತ್ತಾಳೆ. ರಾಕ್ಷಸರ ಸಂಹಾರಕ್ಕೆ ಪಾರ್ವತಿದೇವಿ 7 ಅವತಾರದಲ್ಲಿ ಬರುತ್ತಾಳೆ. ಅದರಲ್ಲಿ ಕೊನೆಯ ಅವತಾರವೇ ಮಾರಮ್ಮ ದೇವಿ. ಇವುಗಳ ಜತೆಗೆ ಒಂದಷ್ಟು ಕಮರ್ಷಿಯಲ್ ಅಂಶಗಳನ್ನೂ ಸೇರಿಸಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.
ಈ ವೇಳೆ ಸಿ.ವಿ ಶ್ರಿನಿವಾಸ್, ಸಾಗರ್ ಗೌಡ, ಯಶಸ್ವಿನಿ ಸಿದ್ದೇಗೌಡ, ಪಿಳ್ಳಪ್ಪ, ಕೆಂಪರಾಜು, ಸಿ.ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…