ದೊಡ್ಡಬಳ್ಳಾಪುರದ ಕೆ.ಎಂ ನಂಜುಂಡೇಶ್ವರ ನಿರ್ಮಾಣದ ಶ್ರೀ ಮಾರಮ್ಮ ದೇವಿ ಕುರಿತ ಭಕ್ತಿಪ್ರಧಾನ ಕಥೆ ಆಧರಿಸಿದ ‘ಸಿಂಹರೂಪಿಣಿ’ ಸಿನಿಮಾ ಅ.17ಕ್ಕೆ ಬಿಡುಗಡೆ

ಕಿನ್ನಾಳ್‌ ರಾಜ್ ನಿರ್ದೇಶನದ ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಆಧರಿಸಿದ ‘ಸಿಂಹರೂಪಿಣಿ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ಅ. 17ರಂದು ರಾಜ್ಯಾದ್ಯಂತ ಹಲವು ಚಿತ್ರ ಮಂದಿರಗಳಲ್ಲಿ ತೆರೆಕಾಣಲಿದೆ.

ಭಕ್ತಿ ಪ್ರಧಾನ ಚಿತ್ರಕ್ಕೆ ಕಿನ್ನಾಳ್‌ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ನಿರ್ದೇಶನ ಮಾಡಿದ್ದು, ದೊಡ್ಡಬಳ್ಳಾಪುರದ ಕೆ.ಎಂ. ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಿಂಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಆಕಾಶ್‌ಪರ್ವ ಸಂಗೀತ, ಕಿರಣ್‌ಕುಮಾ‌ರ್ ಛಾಯಾಗ್ರಹಣ, ವೆಂಕಿ.ಯು.ವಿ ಸಂಕಲನ, ಕಿಶೋ‌ರ್ ಕಲರಿಸ್ಟ್, ಸಾಹಸ ಗ್ರಿಲ್ಲರ್‌ಮಂಜು-ಚಂದ್ರು ಬಂಡೆ- ಮಂಜುನಾಗಪ್ಪ, ಸೌಂಡ್ ಎಫೆಕ್ಟ್ ನಂದು.ಜೆ ಇವರುಗಳ ಶ್ರಮದಿಂದ ಈ ಚಿತ್ರ ಮೂಡಿಬಂದಿದೆ.

ನಟ ಸುಮನ್, ಯಶ್‌ ಶೆಟ್ಟಿ, ಅಂಕಿತಾ ಗೌಡ, ಯಶಸ್ವಿನಿ, ಹರೀಶ್ ರಾಯ್, ನೀನಾಸಂ ಅಶ್ವತ್ಥ್​, ದಿವ್ಯಾ ಆಲೂರು, ವಿಜಯ್‌ ಚೆಂಡೂರು, ಖುಷಿ ಬಸ್ರೂರು ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಹಿರಿಯ ಕಲಾವಿದರು ಸೇರಿದಂತೆ 120ಕ್ಕೂ ಹೆಚ್ಚು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಈ ಸಿನಿಮಾದಲ್ಲಿ ಇದೆ. ಬಹಳ ವರ್ಷಗಳ ನಂತರ ಮತ್ತೊಮ್ಮೆ ದೇವಿ ಶಕ್ತಿ, ಪವಾಡ, ಭಕ್ತವೃಂದ ಕಥಾನಕವನ್ನು ಬೆಳ್ಳಿ ಪರದೆ ಮೇಲೆ ನೋಡುವ ಅವಕಾಶ ಒದಗಿ ಬಂದಿದೆ. ಪ್ರೇಕ್ಷಕರು ಅಮ್ಮನ ಮಕ್ಕಳಾಗಿ ಚಿತ್ರಮಂದಿರಕ್ಕೆ ಬರಬೇಕು ಎಂದು ನಿರ್ಮಾಪಕ ಕೆ.ಎಂ. ನಂಜುಡೇಶ್ವರ ಹೇಳಿದ್ದಾರೆ.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದಲ್ಲಿ ಏನೇ ಕಷ್ಟ ಬಂದರೂ ಜನರು ದೇವರಿಗೆ ಮೊರೆ ಹೋಗುತ್ತಾರೆ. ಜಾತ್ರೆ, ಉತ್ಸವದಲ್ಲಿ ಇನ್ನೂ ನಂಬಿಕೆ ಉಳಿದಿದೆ ಎಂಬಂತಹ ವಿಷಯಗಳನ್ನು ಪಾತ್ರಗಳ ಮೂಲಕ ತೋರಿಸುತ್ತಿದ್ದೇವೆ. ಎಲ್ಲ ದೇವರಿಗೂ ಹಿನ್ನೆಲೆ ಇರುತ್ತದೆ. ಅದೇ ರೀತಿ, ದೇವಿಯು ಮಹಾಲಕ್ಷೀ ರೂಪದಲ್ಲಿ ಭೂಮಿಗೆ ಬಂದು, ನಂತರ ಮಾರಮ್ಮ ಆಗುತ್ತಾಳೆ. ರಾಕ್ಷಸರ ಸಂಹಾರಕ್ಕೆ ಪಾರ್ವತಿದೇವಿ 7 ಅವತಾರದಲ್ಲಿ ಬರುತ್ತಾಳೆ. ಅದರಲ್ಲಿ ಕೊನೆಯ ಅವತಾರವೇ ಮಾರಮ್ಮ ದೇವಿ. ಇವುಗಳ ಜತೆಗೆ ಒಂದಷ್ಟು ಕಮರ್ಷಿಯಲ್ ಅಂಶಗಳನ್ನೂ ಸೇರಿಸಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.

ಈ ವೇಳೆ ಸಿ.ವಿ ಶ್ರಿನಿವಾಸ್, ಸಾಗರ್ ಗೌಡ, ಯಶಸ್ವಿನಿ ಸಿದ್ದೇಗೌಡ, ಪಿಳ್ಳಪ್ಪ, ಕೆಂಪರಾಜು, ಸಿ.ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

4 hours ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

4 hours ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

5 hours ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

9 hours ago

ದಿಢೀರ್ ಸಾವುಗಳ ಸುತ್ತಾ…..

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…

14 hours ago

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

1 day ago