ದೊಡ್ಡಬಳ್ಳಾಪುರದ ಕೆ.ಎಂ ನಂಜುಂಡೇಶ್ವರ ನಿರ್ಮಾಣದ ಶ್ರೀ ಮಾರಮ್ಮ ದೇವಿ ಕುರಿತ ಭಕ್ತಿಪ್ರಧಾನ ಕಥೆ ಆಧರಿಸಿದ ‘ಸಿಂಹರೂಪಿಣಿ’ ಸಿನಿಮಾ ಅ.17ಕ್ಕೆ ಬಿಡುಗಡೆ

ಕಿನ್ನಾಳ್‌ ರಾಜ್ ನಿರ್ದೇಶನದ ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಆಧರಿಸಿದ ‘ಸಿಂಹರೂಪಿಣಿ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ಅ. 17ರಂದು ರಾಜ್ಯಾದ್ಯಂತ ಹಲವು ಚಿತ್ರ ಮಂದಿರಗಳಲ್ಲಿ ತೆರೆಕಾಣಲಿದೆ.

ಭಕ್ತಿ ಪ್ರಧಾನ ಚಿತ್ರಕ್ಕೆ ಕಿನ್ನಾಳ್‌ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ನಿರ್ದೇಶನ ಮಾಡಿದ್ದು, ದೊಡ್ಡಬಳ್ಳಾಪುರದ ಕೆ.ಎಂ. ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಿಂಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಆಕಾಶ್‌ಪರ್ವ ಸಂಗೀತ, ಕಿರಣ್‌ಕುಮಾ‌ರ್ ಛಾಯಾಗ್ರಹಣ, ವೆಂಕಿ.ಯು.ವಿ ಸಂಕಲನ, ಕಿಶೋ‌ರ್ ಕಲರಿಸ್ಟ್, ಸಾಹಸ ಗ್ರಿಲ್ಲರ್‌ಮಂಜು-ಚಂದ್ರು ಬಂಡೆ- ಮಂಜುನಾಗಪ್ಪ, ಸೌಂಡ್ ಎಫೆಕ್ಟ್ ನಂದು.ಜೆ ಇವರುಗಳ ಶ್ರಮದಿಂದ ಈ ಚಿತ್ರ ಮೂಡಿಬಂದಿದೆ.

ನಟ ಸುಮನ್, ಯಶ್‌ ಶೆಟ್ಟಿ, ಅಂಕಿತಾ ಗೌಡ, ಯಶಸ್ವಿನಿ, ಹರೀಶ್ ರಾಯ್, ನೀನಾಸಂ ಅಶ್ವತ್ಥ್​, ದಿವ್ಯಾ ಆಲೂರು, ವಿಜಯ್‌ ಚೆಂಡೂರು, ಖುಷಿ ಬಸ್ರೂರು ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಹಿರಿಯ ಕಲಾವಿದರು ಸೇರಿದಂತೆ 120ಕ್ಕೂ ಹೆಚ್ಚು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಈ ಸಿನಿಮಾದಲ್ಲಿ ಇದೆ. ಬಹಳ ವರ್ಷಗಳ ನಂತರ ಮತ್ತೊಮ್ಮೆ ದೇವಿ ಶಕ್ತಿ, ಪವಾಡ, ಭಕ್ತವೃಂದ ಕಥಾನಕವನ್ನು ಬೆಳ್ಳಿ ಪರದೆ ಮೇಲೆ ನೋಡುವ ಅವಕಾಶ ಒದಗಿ ಬಂದಿದೆ. ಪ್ರೇಕ್ಷಕರು ಅಮ್ಮನ ಮಕ್ಕಳಾಗಿ ಚಿತ್ರಮಂದಿರಕ್ಕೆ ಬರಬೇಕು ಎಂದು ನಿರ್ಮಾಪಕ ಕೆ.ಎಂ. ನಂಜುಡೇಶ್ವರ ಹೇಳಿದ್ದಾರೆ.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದಲ್ಲಿ ಏನೇ ಕಷ್ಟ ಬಂದರೂ ಜನರು ದೇವರಿಗೆ ಮೊರೆ ಹೋಗುತ್ತಾರೆ. ಜಾತ್ರೆ, ಉತ್ಸವದಲ್ಲಿ ಇನ್ನೂ ನಂಬಿಕೆ ಉಳಿದಿದೆ ಎಂಬಂತಹ ವಿಷಯಗಳನ್ನು ಪಾತ್ರಗಳ ಮೂಲಕ ತೋರಿಸುತ್ತಿದ್ದೇವೆ. ಎಲ್ಲ ದೇವರಿಗೂ ಹಿನ್ನೆಲೆ ಇರುತ್ತದೆ. ಅದೇ ರೀತಿ, ದೇವಿಯು ಮಹಾಲಕ್ಷೀ ರೂಪದಲ್ಲಿ ಭೂಮಿಗೆ ಬಂದು, ನಂತರ ಮಾರಮ್ಮ ಆಗುತ್ತಾಳೆ. ರಾಕ್ಷಸರ ಸಂಹಾರಕ್ಕೆ ಪಾರ್ವತಿದೇವಿ 7 ಅವತಾರದಲ್ಲಿ ಬರುತ್ತಾಳೆ. ಅದರಲ್ಲಿ ಕೊನೆಯ ಅವತಾರವೇ ಮಾರಮ್ಮ ದೇವಿ. ಇವುಗಳ ಜತೆಗೆ ಒಂದಷ್ಟು ಕಮರ್ಷಿಯಲ್ ಅಂಶಗಳನ್ನೂ ಸೇರಿಸಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.

ಈ ವೇಳೆ ಸಿ.ವಿ ಶ್ರಿನಿವಾಸ್, ಸಾಗರ್ ಗೌಡ, ಯಶಸ್ವಿನಿ ಸಿದ್ದೇಗೌಡ, ಪಿಳ್ಳಪ್ಪ, ಕೆಂಪರಾಜು, ಸಿ.ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

54 minutes ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

3 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

4 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

8 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

9 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

17 hours ago