ಕಿನ್ನಾಳ್ ರಾಜ್ ನಿರ್ದೇಶನದ ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಆಧರಿಸಿದ ‘ಸಿಂಹರೂಪಿಣಿ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ಅ. 17ರಂದು ರಾಜ್ಯಾದ್ಯಂತ ಹಲವು ಚಿತ್ರ ಮಂದಿರಗಳಲ್ಲಿ ತೆರೆಕಾಣಲಿದೆ.
ಭಕ್ತಿ ಪ್ರಧಾನ ಚಿತ್ರಕ್ಕೆ ಕಿನ್ನಾಳ್ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ನಿರ್ದೇಶನ ಮಾಡಿದ್ದು, ದೊಡ್ಡಬಳ್ಳಾಪುರದ ಕೆ.ಎಂ. ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಿಂಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಆಕಾಶ್ಪರ್ವ ಸಂಗೀತ, ಕಿರಣ್ಕುಮಾರ್ ಛಾಯಾಗ್ರಹಣ, ವೆಂಕಿ.ಯು.ವಿ ಸಂಕಲನ, ಕಿಶೋರ್ ಕಲರಿಸ್ಟ್, ಸಾಹಸ ಗ್ರಿಲ್ಲರ್ಮಂಜು-ಚಂದ್ರು ಬಂಡೆ- ಮಂಜುನಾಗಪ್ಪ, ಸೌಂಡ್ ಎಫೆಕ್ಟ್ ನಂದು.ಜೆ ಇವರುಗಳ ಶ್ರಮದಿಂದ ಈ ಚಿತ್ರ ಮೂಡಿಬಂದಿದೆ.
ನಟ ಸುಮನ್, ಯಶ್ ಶೆಟ್ಟಿ, ಅಂಕಿತಾ ಗೌಡ, ಯಶಸ್ವಿನಿ, ಹರೀಶ್ ರಾಯ್, ನೀನಾಸಂ ಅಶ್ವತ್ಥ್, ದಿವ್ಯಾ ಆಲೂರು, ವಿಜಯ್ ಚೆಂಡೂರು, ಖುಷಿ ಬಸ್ರೂರು ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಹಿರಿಯ ಕಲಾವಿದರು ಸೇರಿದಂತೆ 120ಕ್ಕೂ ಹೆಚ್ಚು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.
ಶ್ರೀ ಮಾರಮ್ಮ ದೇವಿ ಕುರಿತ ಸಾಮಾಜಿಕ ಮತ್ತು ಭಕ್ತಿಪ್ರಧಾನ ಕಥೆ ಈ ಸಿನಿಮಾದಲ್ಲಿ ಇದೆ. ಬಹಳ ವರ್ಷಗಳ ನಂತರ ಮತ್ತೊಮ್ಮೆ ದೇವಿ ಶಕ್ತಿ, ಪವಾಡ, ಭಕ್ತವೃಂದ ಕಥಾನಕವನ್ನು ಬೆಳ್ಳಿ ಪರದೆ ಮೇಲೆ ನೋಡುವ ಅವಕಾಶ ಒದಗಿ ಬಂದಿದೆ. ಪ್ರೇಕ್ಷಕರು ಅಮ್ಮನ ಮಕ್ಕಳಾಗಿ ಚಿತ್ರಮಂದಿರಕ್ಕೆ ಬರಬೇಕು ಎಂದು ನಿರ್ಮಾಪಕ ಕೆ.ಎಂ. ನಂಜುಡೇಶ್ವರ ಹೇಳಿದ್ದಾರೆ.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದಲ್ಲಿ ಏನೇ ಕಷ್ಟ ಬಂದರೂ ಜನರು ದೇವರಿಗೆ ಮೊರೆ ಹೋಗುತ್ತಾರೆ. ಜಾತ್ರೆ, ಉತ್ಸವದಲ್ಲಿ ಇನ್ನೂ ನಂಬಿಕೆ ಉಳಿದಿದೆ ಎಂಬಂತಹ ವಿಷಯಗಳನ್ನು ಪಾತ್ರಗಳ ಮೂಲಕ ತೋರಿಸುತ್ತಿದ್ದೇವೆ. ಎಲ್ಲ ದೇವರಿಗೂ ಹಿನ್ನೆಲೆ ಇರುತ್ತದೆ. ಅದೇ ರೀತಿ, ದೇವಿಯು ಮಹಾಲಕ್ಷೀ ರೂಪದಲ್ಲಿ ಭೂಮಿಗೆ ಬಂದು, ನಂತರ ಮಾರಮ್ಮ ಆಗುತ್ತಾಳೆ. ರಾಕ್ಷಸರ ಸಂಹಾರಕ್ಕೆ ಪಾರ್ವತಿದೇವಿ 7 ಅವತಾರದಲ್ಲಿ ಬರುತ್ತಾಳೆ. ಅದರಲ್ಲಿ ಕೊನೆಯ ಅವತಾರವೇ ಮಾರಮ್ಮ ದೇವಿ. ಇವುಗಳ ಜತೆಗೆ ಒಂದಷ್ಟು ಕಮರ್ಷಿಯಲ್ ಅಂಶಗಳನ್ನೂ ಸೇರಿಸಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.
ಈ ವೇಳೆ ಸಿ.ವಿ ಶ್ರಿನಿವಾಸ್, ಸಾಗರ್ ಗೌಡ, ಯಶಸ್ವಿನಿ ಸಿದ್ದೇಗೌಡ, ಪಿಳ್ಳಪ್ಪ, ಕೆಂಪರಾಜು, ಸಿ.ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…