ದೊಡ್ಡಬಳ್ಳಾಪುರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

 

ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ವಯಸ್ಸಿಗೆ ಅನುಗುಣವಾಗಿ ಪ್ರತ್ಯೇಕವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರ ನಗರದಲ್ಲಿರುವ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಇಂದು (ಸೆ.16) ಬೆಳಗ್ಗೆ-10:00 ಗಂಟೆಗೆ ಏರ್ಪಡಿಸಲಾಗಿತ್ತು.

ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಅವರು ಉದ್ಘಾಟಿಸಿದರು.

*ಕ್ರೀಡಾ ಸ್ಪರ್ಧೆಗಳು*

ಮ್ಯೂಸಿಕಲ್ ಚೇರ್ (60 ರಿಂದ 69 ವರ್ಷ), ಬಿರುಸಿನ ನಡಿಗೆ (60 ರಿಂದ 70 ವರ್ಷ ಹಾಗೂ ಮೇಲ್ಪಟ್ಟವರು). ಬಕೆಟ್‌ ಗೆ ಬಾಲ್ ಎಸೆಯುವುದು(60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)

*ಸಾಂಸ್ಕೃತಿಕ ಸ್ಪರ್ಧೆಗಳು*

ಗಾಯನ ಸ್ಪರ್ದೆ (60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)

ಏಕ ಪಾತ್ರಾಭಿನಯ (60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)

ಸ್ಪರ್ಧೆಗೆ ಭಾಗವಹಿಸುವ ಹಿರಿಯ ನಾಗರಿಕರು ಕಡ್ಡಾಯವಾಗಿ ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಾಜರಾಗಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಿಸಿದ್ದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ವಿನೋದ್, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಸತೀಶ್ ಪಾಣಿ, ನಿವೃತ್ತ ನೌಕರರ ಜಿಲ್ಲಾ ಸಂಘದ ಮಹಾಲಿಂಗಯ್ಯ, ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಅಮಲಿ ನಾಯಕ್, ಗ್ರಾಮೀಣ ನಗರ ಹಾಗೂ ವಿರೋದ್ದೇಶ ಪುನರ್ವಸತಿ ಕಾರ್ಯಕರ್ತರು, ಜಿಲ್ಲಾ ಸಂಘ ಸಂಸ್ಥೆಗಳ ಸಿಬ್ಬಂದಿ ಹಿರಿಯ ನಾಗರಿಕರು ಕಚೇರಿಯ ಸಿಬ್ಬಂದಿ, ನರಸಿಂಹಮೂರ್ತಿ, ರವಿಕುಮಾರ್, ಕೇಶವ, ಪ್ರಸನ್ನ ಉಪಸ್ಥಿತರಿದ್ದರು‌‌‌..

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

12 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

17 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago