ದೊಡ್ಡಬಳ್ಳಾಪುರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

 

ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ವಯಸ್ಸಿಗೆ ಅನುಗುಣವಾಗಿ ಪ್ರತ್ಯೇಕವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರ ನಗರದಲ್ಲಿರುವ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಇಂದು (ಸೆ.16) ಬೆಳಗ್ಗೆ-10:00 ಗಂಟೆಗೆ ಏರ್ಪಡಿಸಲಾಗಿತ್ತು.

ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಅವರು ಉದ್ಘಾಟಿಸಿದರು.

*ಕ್ರೀಡಾ ಸ್ಪರ್ಧೆಗಳು*

ಮ್ಯೂಸಿಕಲ್ ಚೇರ್ (60 ರಿಂದ 69 ವರ್ಷ), ಬಿರುಸಿನ ನಡಿಗೆ (60 ರಿಂದ 70 ವರ್ಷ ಹಾಗೂ ಮೇಲ್ಪಟ್ಟವರು). ಬಕೆಟ್‌ ಗೆ ಬಾಲ್ ಎಸೆಯುವುದು(60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)

*ಸಾಂಸ್ಕೃತಿಕ ಸ್ಪರ್ಧೆಗಳು*

ಗಾಯನ ಸ್ಪರ್ದೆ (60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)

ಏಕ ಪಾತ್ರಾಭಿನಯ (60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)

ಸ್ಪರ್ಧೆಗೆ ಭಾಗವಹಿಸುವ ಹಿರಿಯ ನಾಗರಿಕರು ಕಡ್ಡಾಯವಾಗಿ ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಾಜರಾಗಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಿಸಿದ್ದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ವಿನೋದ್, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಸತೀಶ್ ಪಾಣಿ, ನಿವೃತ್ತ ನೌಕರರ ಜಿಲ್ಲಾ ಸಂಘದ ಮಹಾಲಿಂಗಯ್ಯ, ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಅಮಲಿ ನಾಯಕ್, ಗ್ರಾಮೀಣ ನಗರ ಹಾಗೂ ವಿರೋದ್ದೇಶ ಪುನರ್ವಸತಿ ಕಾರ್ಯಕರ್ತರು, ಜಿಲ್ಲಾ ಸಂಘ ಸಂಸ್ಥೆಗಳ ಸಿಬ್ಬಂದಿ ಹಿರಿಯ ನಾಗರಿಕರು ಕಚೇರಿಯ ಸಿಬ್ಬಂದಿ, ನರಸಿಂಹಮೂರ್ತಿ, ರವಿಕುಮಾರ್, ಕೇಶವ, ಪ್ರಸನ್ನ ಉಪಸ್ಥಿತರಿದ್ದರು‌‌‌..

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

6 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

7 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

8 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

11 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

21 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago