ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ವಯಸ್ಸಿಗೆ ಅನುಗುಣವಾಗಿ ಪ್ರತ್ಯೇಕವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರ ನಗರದಲ್ಲಿರುವ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಇಂದು (ಸೆ.16) ಬೆಳಗ್ಗೆ-10:00 ಗಂಟೆಗೆ ಏರ್ಪಡಿಸಲಾಗಿತ್ತು.
ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಅವರು ಉದ್ಘಾಟಿಸಿದರು.
*ಕ್ರೀಡಾ ಸ್ಪರ್ಧೆಗಳು*
ಮ್ಯೂಸಿಕಲ್ ಚೇರ್ (60 ರಿಂದ 69 ವರ್ಷ), ಬಿರುಸಿನ ನಡಿಗೆ (60 ರಿಂದ 70 ವರ್ಷ ಹಾಗೂ ಮೇಲ್ಪಟ್ಟವರು). ಬಕೆಟ್ ಗೆ ಬಾಲ್ ಎಸೆಯುವುದು(60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)
*ಸಾಂಸ್ಕೃತಿಕ ಸ್ಪರ್ಧೆಗಳು*
ಗಾಯನ ಸ್ಪರ್ದೆ (60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)
ಏಕ ಪಾತ್ರಾಭಿನಯ (60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)
ಸ್ಪರ್ಧೆಗೆ ಭಾಗವಹಿಸುವ ಹಿರಿಯ ನಾಗರಿಕರು ಕಡ್ಡಾಯವಾಗಿ ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಾಜರಾಗಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಿಸಿದ್ದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ವಿನೋದ್, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಸತೀಶ್ ಪಾಣಿ, ನಿವೃತ್ತ ನೌಕರರ ಜಿಲ್ಲಾ ಸಂಘದ ಮಹಾಲಿಂಗಯ್ಯ, ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಅಮಲಿ ನಾಯಕ್, ಗ್ರಾಮೀಣ ನಗರ ಹಾಗೂ ವಿರೋದ್ದೇಶ ಪುನರ್ವಸತಿ ಕಾರ್ಯಕರ್ತರು, ಜಿಲ್ಲಾ ಸಂಘ ಸಂಸ್ಥೆಗಳ ಸಿಬ್ಬಂದಿ ಹಿರಿಯ ನಾಗರಿಕರು ಕಚೇರಿಯ ಸಿಬ್ಬಂದಿ, ನರಸಿಂಹಮೂರ್ತಿ, ರವಿಕುಮಾರ್, ಕೇಶವ, ಪ್ರಸನ್ನ ಉಪಸ್ಥಿತರಿದ್ದರು..
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…