2024-25ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಈಗಾಗಲೇ ನೋಂದಣಿಯಾದ ರೈತರಿಂದ ರಾಗಿಯನ್ನು ಖರೀದಿಸಲು ರಾಗಿ ಖರೀದಿ ಕೇಂದ್ರವನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಗೋದಾಮು, ಸರ್ಕಾರಿ ಆಸ್ಪತ್ರೆ ಹಿಂಭಾಗ, ಚಿಕ್ಕಬಳ್ಳಾಪುರ ರಸ್ತೆ, ದೊಡ್ಡಬಳ್ಳಾಪುರ ತಾಲ್ಲೂಕು ಇಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದ ನೊಂದಾಯಿತ ರೈತರು ಸ್ಥಳಾಂತರಿಸಲಾದ ರಾಗಿ ಖರೀದಿ ಕೇಂದ್ರದಲ್ಲಿ ರಾಗಿಯನ್ನು ತಂದು ಮಾರಾಟ ಮಾಡಬಹುದಾಗಿದೆ.
ಈ ಹಿಂದೆ ದೊಡ್ಡಬಳ್ಳಾಪುರ ತಾಲ್ಲೂಕಿನ ಗುಂಡುಂಮಗೆರೆ ಕ್ರಾಸ್ ನ ಕೆ.ಎಸ್.ಡಬ್ಲು.ಸಿ ಘಟಕ-2 ಅಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಲಾಗಿತ್ತು. ಈ ಉಗ್ರಾಣ ಕೇಂದ್ರದಲ್ಲಿ ರಾಗಿಯ ಜೊತೆಗೆ ಭಾರತ ಆಹಾರ ನಿಗಮದ ಅಕ್ಕಿ ಸರಕು ಸಂಗ್ರಹಿಸಿದ್ದು ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ವಿವಿಧ ಸಗಟು ಮಳಿಗೆಗಳಿಗೆ ಎತ್ತುವಳಿ ಮಾಡಬೇಕಾಗಿದೆ. ಆದುದರಿಂದ ಸರ್ಕಾರದ ಎರಡು ಯೋಜನೆಗಳಿಗೆ ಅನುಕೂಲವಾಗುವಂತೆ ರಾಗಿ ಖರೀದಿ ಕೇಂದ್ರವನ್ನು ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…
ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…
ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…
ಮನನೊಂದ ವ್ಯಕ್ತಿಯೋರ್ವ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ತಾಂಭಿಕಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ನಡೆದಿದೆ....…
2026ಕ್ಕೆ ಕೆಲವೇ ಗಂಟೆಗಳು ಇರುವಾಗ.......... ಒಂದು ಜೀವನದ ಇಲ್ಲಿಯವರೆಗಿನ ನೆನಪಿನ ಪಯಣ......... " ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ…
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ಆಯೋಗವು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ…