2024-25ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಈಗಾಗಲೇ ನೋಂದಣಿಯಾದ ರೈತರಿಂದ ರಾಗಿಯನ್ನು ಖರೀದಿಸಲು ರಾಗಿ ಖರೀದಿ ಕೇಂದ್ರವನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಗೋದಾಮು, ಸರ್ಕಾರಿ ಆಸ್ಪತ್ರೆ ಹಿಂಭಾಗ, ಚಿಕ್ಕಬಳ್ಳಾಪುರ ರಸ್ತೆ, ದೊಡ್ಡಬಳ್ಳಾಪುರ ತಾಲ್ಲೂಕು ಇಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದ ನೊಂದಾಯಿತ ರೈತರು ಸ್ಥಳಾಂತರಿಸಲಾದ ರಾಗಿ ಖರೀದಿ ಕೇಂದ್ರದಲ್ಲಿ ರಾಗಿಯನ್ನು ತಂದು ಮಾರಾಟ ಮಾಡಬಹುದಾಗಿದೆ.
ಈ ಹಿಂದೆ ದೊಡ್ಡಬಳ್ಳಾಪುರ ತಾಲ್ಲೂಕಿನ ಗುಂಡುಂಮಗೆರೆ ಕ್ರಾಸ್ ನ ಕೆ.ಎಸ್.ಡಬ್ಲು.ಸಿ ಘಟಕ-2 ಅಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಲಾಗಿತ್ತು. ಈ ಉಗ್ರಾಣ ಕೇಂದ್ರದಲ್ಲಿ ರಾಗಿಯ ಜೊತೆಗೆ ಭಾರತ ಆಹಾರ ನಿಗಮದ ಅಕ್ಕಿ ಸರಕು ಸಂಗ್ರಹಿಸಿದ್ದು ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ವಿವಿಧ ಸಗಟು ಮಳಿಗೆಗಳಿಗೆ ಎತ್ತುವಳಿ ಮಾಡಬೇಕಾಗಿದೆ. ಆದುದರಿಂದ ಸರ್ಕಾರದ ಎರಡು ಯೋಜನೆಗಳಿಗೆ ಅನುಕೂಲವಾಗುವಂತೆ ರಾಗಿ ಖರೀದಿ ಕೇಂದ್ರವನ್ನು ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…