ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್ ಬಗ್ಗೆ ಅರಿವು ಮತ್ತು ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮವನ್ನು ಇಂದು ಬೆಳಗ್ಗೆ ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ(ಟಿಬಿ ಸರ್ಕಲ್) ಮುಂಭಾಗ ಹಮ್ಮಿಕೊಳ್ಳಲಾಗಿತ್ತು….

ಈ ವೇಳೆ ಪೊಲೀಸರು ಹೆಲ್ಮೆಟ್ ಧರಿಸಿ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಬೈಕ್ ನಲ್ಲಿ ಸಂಚರಿಸಿ ಜನರಿಗೆ ಹೆಲ್ಮೆಟ್ ಬಗ್ಗೆ ಅರಿವು ಮೂಡಿಸಿದರು…

ಹೆಲ್ಮೆಟ್ ಅರಿವು ಕಾರ್ಯಕ್ರಮಕ್ಕೆ ಡಿವೈಎಸ್ ಪಿ ಪಾಂಡುರಂಗ ಚಾಲನೆ ನೀಡಿದರು….

ಹೆಲ್ಮೆಟ್ ಇಲ್ಲದ ಬೈಕ್ ಚಾಲನೆ ಮಾಡುತ್ತಿದ್ದವರಿಗೆ ಹೆಲ್ಮೆಟ್ ವಿತರಸಿ, ಇನ್ನು ಮುಂದೆ ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡಿದರೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು…

ಅದರಂತೆ ಹಿಂಬದಿ ಕುಳಿತುಕೊಳ್ಳುವ ಮಕ್ಕಳಿಗೂ ಹೆಲ್ಮೆಟ್ ವಿತರಣೆ ಮಾಡಲಾಯಿತು..

ಈ ವೇಳೆ ದೊಡ್ಡಬಳ್ಳಾಪುರ ಉಪವಿಭಾಗದ ಎಲ್ಲಾ ಠಾಣೆಗಳ ಇನ್ಸ್ ಪೆಕ್ಟರ್ ಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು….

Ramesh Babu

Journalist

Recent Posts

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

5 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

6 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

17 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

23 hours ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

1 day ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

1 day ago