ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್ ಬಗ್ಗೆ ಅರಿವು ಮತ್ತು ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮವನ್ನು ಇಂದು ಬೆಳಗ್ಗೆ ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ(ಟಿಬಿ ಸರ್ಕಲ್) ಮುಂಭಾಗ ಹಮ್ಮಿಕೊಳ್ಳಲಾಗಿತ್ತು….
ಈ ವೇಳೆ ಪೊಲೀಸರು ಹೆಲ್ಮೆಟ್ ಧರಿಸಿ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಬೈಕ್ ನಲ್ಲಿ ಸಂಚರಿಸಿ ಜನರಿಗೆ ಹೆಲ್ಮೆಟ್ ಬಗ್ಗೆ ಅರಿವು ಮೂಡಿಸಿದರು…
ಹೆಲ್ಮೆಟ್ ಅರಿವು ಕಾರ್ಯಕ್ರಮಕ್ಕೆ ಡಿವೈಎಸ್ ಪಿ ಪಾಂಡುರಂಗ ಚಾಲನೆ ನೀಡಿದರು….
ಹೆಲ್ಮೆಟ್ ಇಲ್ಲದ ಬೈಕ್ ಚಾಲನೆ ಮಾಡುತ್ತಿದ್ದವರಿಗೆ ಹೆಲ್ಮೆಟ್ ವಿತರಸಿ, ಇನ್ನು ಮುಂದೆ ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡಿದರೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು…
ಅದರಂತೆ ಹಿಂಬದಿ ಕುಳಿತುಕೊಳ್ಳುವ ಮಕ್ಕಳಿಗೂ ಹೆಲ್ಮೆಟ್ ವಿತರಣೆ ಮಾಡಲಾಯಿತು..
ಈ ವೇಳೆ ದೊಡ್ಡಬಳ್ಳಾಪುರ ಉಪವಿಭಾಗದ ಎಲ್ಲಾ ಠಾಣೆಗಳ ಇನ್ಸ್ ಪೆಕ್ಟರ್ ಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು….
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…