ದೊಡ್ಡಬಳ್ಳಾಪುರ ಉಪವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಕಳವು ಪ್ರಕರಣಗಳು, ಸರಗಳ್ಳತನ ಪ್ರಕರಣಗಳು, ಎನ್.ಡಿ.ಪಿ.ಎಸ್, ಸ್ವತ್ತು ಅಪರಾಧ ಸೇರಿದಂತೆ ಒಟ್ಟು 56 ಪ್ರಕರಣಗಳನ್ನ ಬೇಧಿಸಿ, 30ಮಂದಿ ಆರೋಪಿಗಳನ್ನ ಬಂಧಿಸಿ, ಬಂಧಿತರಿಂದ ಸುಮಾರು 1ಕೋಟಿಗೂ ಅಧಿಕ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿರುವ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾಹಿತಿ ನೀಡಿದ್ದಾರೆ.
ಹಲವು ಕ್ಲಿಷ್ಟ ಪ್ರಕರಣಗಳನ್ನು ಬೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡುವುದರ ಮೂಲಕ ಮತ್ತಷ್ಟು ಉತ್ತಮ ಕಾರ್ಯ ಮಾಡಲು ಅಭಿನಂದಿಸಿದ್ದಾರೆ.
ಜೊತೆಗೆ ವಸ್ತುಗಳನ್ನು ಕಳೆದುಕೊಡ ಮಾಲೀಕರಿಗೆ ಅವರ ವಸ್ತುಗಳನ್ನು ಹಸ್ತಾಂತರ ಮಾಡಲಾಯಿತು.
ಈ ವೇಳೆ ಎಎಸ್ಪಿ ಪುರುಷೋತ್ತಮ, ಡಿವೈಎಸ್ಪಿ ರವಿ.ಪಿ, ದೊಡ್ಡಬಳ್ಳಾಪುರ ಉಪವಿಭಾಗದ ವೃತ್ತ ನಿರೀಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.