
ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ನೇತೃತ್ವದಲ್ಲಿ ಬೆಂಗಳೂರು ಉತ್ತರ-ದಕ್ಷಿಣ ಮತ್ತು ದೊಡ್ಡಬಳ್ಳಾಪುರ ವ್ಯಾಪ್ತಿಯ ಉಪ-ವಿಭಾಗಾಧಿಕಾರಿ (ಎಸಿ) ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಅಧಿಕಾರಿಗಳ ಜೊತೆ ಇಂದು ಪರಿಶೀಲನಾ ಸಭೆ ನಡೆಸಲಾಯಿತು.
ಸಭೆಯಲ್ಲಿ ದೊಡ್ಡಬಳ್ಳಾಪುರ ಉಪ-ವಿಭಾಗಾಧಿಕಾರಿ (ಎಸಿ) ದುರ್ಗಾಶ್ರೀ ಅವರು ಭಾಗವಹಿಸಿ (ಎಸಿ) ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಸಚಿವರ ಗಮನಕ್ಕೆ ತಂದರು.
ಈ ವೇಳೆ ಕಂದಾಯ ಇಲಾಖಾ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು….