ದೊಡ್ಡಬಳ್ಳಾಪುರ-ಎಸ್.ಎಸ್.ಘಾಟಿ ಮಾರ್ಗದ KSRTC ಬಸ್ ಫುಲ್ ರಶ್: ವಿದ್ಯಾರ್ಥಿಗಳ ಪರದಾಟ

ದೊಡ್ಡಬಳ್ಳಾಪುರ-ಎಸ್ ಎಸ್ ಘಾಟಿ ಮಾರ್ಗದ KSRTC ಬಸ್ ಬೆಳಗ್ಗೆ 8ಗಂಟೆ ಸಮಯದಲ್ಲಿ ಫುಲ್ ರಶ್ ಆಗಿದ್ದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ಹೋಗಲು ಆಗದೇ ಪರದಾಡುವಂತಾಗಿತ್ತು.

ಇಂದು ಮಂಗಳವಾರ ಆದ್ದರಿಂದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ‌ ಪಡೆದು ಬಸ್ ಹತ್ತಿದ್ದರು. ಈ ಹಿನ್ನೆಲೆ ಬಸ್ ಫುಲ್ ರಶ್ ಆಗಿ ವಿದ್ಯಾರ್ಥಿಗಳಿಗೆ ಜಾಗ ಇಲ್ಲದಂತಾಗುತ್ತು.

ಹೆಚ್ಚುವರಿ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ದೊಡ್ಡಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ಘಟಕ ವ್ಯವಸ್ಥಾಪಕ ಎಸ್.ಆರ್ ಸಂತೋಷ್, ಇಂದು ಮಂಗಳವಾರವಾದ್ದರಿಂದ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಮಹಿಳೆಯರು ಹೆಚ್ಚಿಗೆ ಸಂಖ್ಯೆಯಲ್ಲಿ ಬಂದಿದ್ದು ಈ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಶೀಘ್ರದಲ್ಲೇ ಈ ತೊಂದರೆ ಬಗೆಹರಿಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.

ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ದೊಡ್ಡಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ಘಟಕ ವ್ಯವಸ್ಥಾಪಕ ಎಸ್.ಆರ್ ಸಂತೋಷ್ ಅವರಿಗೆ ಮನವಿ ಪತ್ರ ಸಲ್ಲಿಸಿದ ವಿದ್ಯಾರ್ಥಿಗಳು

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago