ದೊಡ್ಡಬಳ್ಳಾಪುರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ದಿನಪತ್ರಿಕೆ ಹಂಚುವ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ದೊಡ್ಡಬಳ್ಳಾಪುರ: ಸಂಘಟನೆಗಳು ಜನಸ್ನೇಹಿಯಾದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ವಿಶಿಷ್ಟವಾಗಿ ಕಾರ್ಯನಿರ್ವಹಿಸುವ ಅವಕಾಶ ಇದೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್‌ ಹೇಳಿದರು.

ನಗರದಲ್ಲಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಡೆದ ದಿನಪತ್ರಿಕೆ ಹಂಚುವ ಮಕ್ಕಳಿಗೆ ಪುಸ್ತಕ, ಲೇಖನ ಪರಿಕರಗಳ ವಿತರಣೆ ಹಾಗೂ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಮ್ಮ ಸಂಸ್ಥೆಯ ಮೂಲಕ ನಿತ್ಯ ದಾಸೋಹ ಸೇವೆ ನಿರಂತರವಾಗಿ ನಡೆಯುತ್ತಿದ್ದು, ಹಲವು ದಾನಿಗಳು ಇದಕ್ಕೆ ಕೈಜೋಡಿಸಿದ್ದಾರೆ. ದಿನಪತ್ರಿಕೆ ಹಂಚುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ನೋಟ್‌ ಪುಸ್ತಕ ಹಾಗೂ ಲೇಖನ ಪರಿಕರಗಳನ್ನು ವಿತರಿಸಲಾಗುತ್ತಿದೆ. ನಿತ್ಯದ ಸುದ್ದಿಗಳನ್ನು ಜನತೆಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಎಷ್ಟು ಗಣನೀಯವೋ ಅದೇ ರೀತಿಯಲ್ಲಿ ಸುದ್ದಿಪತ್ರಿಕೆ ಹಂಚುವ ವಿತರಕರು ಹಾಗೂ ಮನೆಮನೆಗೆ ತಲುಪಿಸುವ ಮಕ್ಕಳ ಕೊಡುಗೆಯೂ ಅಪಾರ ಎಂದರು.

ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್ ಮಾತನಾಡಿ, ಕನ್ನಡ ಸಂಘಟನೆಗಳು ವಿಭಿನ್ನವಾಗಿ ತನ್ನ ಆಶಯಗಳ ಸಾಕಾರಕ್ಕೆ ಶ್ರಮಿಸುವ ಅವಕಾಶಗಳಿದ್ದು, ಪ್ರಜ್ಞಾಪೂರ್ವಕವಾಗಿ ಬಳಸಿಕೊಳ್ಳುವುದು ಅಗತ್ಯ. ಪತ್ರಿಕೆ ಹಂಚುವ ಮಕ್ಕಳ ಶೈಕ್ಷಣಿಕ ಮುನ್ನಡೆಗೆ ಪ್ರೋತ್ಸಾಹದಾಯಕವಾಗಿ ಪುಸ್ತಕಗಳ ವಿತರಣೆಗೆ ಮುಂದಾಗಿರುವುದು ಉತ್ತಮ ಬೆಳವಣಿಗೆ. ಸಾಮಾಜಿಕ ಪ್ರಗತಿಗೆ ಶೈಕ್ಷಣಿಕ ಸಬಲೀಕರಣವೇ ಪ್ರಧಾನ. ವಿದ್ಯಾವಂತ ಸಮಾಜ ನಿರ್ಮಾಣಕ್ಕೆ ಸಂಘಟನೆಗಳು ಈ ರೀತಿಯ ಕಾರ್ಯಕ್ರಮಗಳ ಮೂಲಕ ಶ್ರಮಿಸುತ್ತಿರುವುದು ಗಣನೀಯ ಎಂದರು.

ಕಾರ್ಯಕ್ರಮವನ್ನು ತಾಲೂಕು ವೈದ್ಯಾಧಿಕಾರಿ ಡಾ.ಶಾರದಾ ನಾಗಾನಾಥ್ ಉದ್ಘಾಟಿಸಿದರು. ಇದೇ ವೇಳೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರಮೇಶ್, ಮೆಳೇಕೋಟೆಯ ವೈದ್ಯಾಧಿಕಾರಿ ಡಾ.ಅರುಣ್‌ ಕುಮಾರ್, ಮಕ್ಕಳ ತಜ್ಞ ಡಾ.ಸುಭಾಶ್‌ ಶಿಂಪಿಗೇರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಶೇಖರ್.ಡಿ. ಉಪ್ಪಾರ್, ಶಿಕ್ಷಕಿ ಜಿ.ರೂಪಶ್ರೀ, ಕುಸ್ತಿ ತರಬೇತುದಾರ ಪೈಲ್ವಾನ್‌ ಚೌಡಪ್ಪ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಜುನಾಥ್‌ ಸುಗಟೂರು, ಬಾಲೆಪುರ ಮಂಜಣ್ಣ, ಜಗದೀಶ್‌ ಬೂದಿಹಾಳ, ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ಸಂಘಟನಾ ಕಾರ್ಯದರ್ಶಿ ಅರವಿಂದ್, ಚೇತನ್‌ಗೌಡ, ಸುಭಾಷ್‌ಚಂದ್ರ, ದೊಡ್ಡೇಗೌಡ, ಅಲ್ತಾಫ್‌, ರಂಜಿತ್, ನರೇಂದ್ರ, ಸುರೇಶ್‌ ದಾವಣಗೆರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 minute ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago