ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷ ಸಂಘಟನೆ ಮಾಡಿ ಪಕ್ಷವನ್ನು ಬಲಪಡಿಸಬೇಕು. ಅದಕ್ಕೆ ನಮ್ಮ ಸಹಕಾರವಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಚಂದ್ರೇ ಗೌಡ ಹೇಳಿದರು..
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರ ನೇಮಕ ಸಭೆಯಲ್ಲಿ ನರಸಿಂಹ ಮೂರ್ತಿ ಅವರಿಗೆ ನೇಮಕ ಪತ್ರ ನೀಡಿ ಅವರು ಮಾತನಾಡಿದರು.
ನಂತರ ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಮಾತನಾಡಿ, ನರಸಿಂಹ ಮೂರ್ತಿ ಅವರನ್ನು ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಶಿಫಾರಸ್ಸು ಮಾಡಲಾಗಿತ್ತು, ಅದರಂತೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಚಂದ್ರೇ ಗೌಡ ಅವರು ನರಸಿಂಹ ಮೂರ್ತಿ ಅವರಿಗೆ ಆದೇಶ ಪತ್ರ ನೀಡಿ ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದರು..
ಈ ವೇಳೆ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹರಿಶ್ ಚಕ್ರವರ್ತಿ, ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾ ಮೂರ್ತಿ, ರಂಗಸ್ವಾಮಿ, ಕರಾಟೆ ಶ್ರೀನಿವಾಸ್, ಮಂಜುನಾಥ್, ಕೆಎಸ್ ನರಸಿಂಹಮೂರ್ತಿ, ವೀರೇಶ್, ರಮೇಶ್ ಸೇರಿದಂತೆ ಇತರರು ಇದ್ದರು..
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…