ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷ ಸಂಘಟನೆ ಮಾಡಿ ಪಕ್ಷವನ್ನು ಬಲಪಡಿಸಬೇಕು. ಅದಕ್ಕೆ ನಮ್ಮ ಸಹಕಾರವಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಚಂದ್ರೇ ಗೌಡ ಹೇಳಿದರು..
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರ ನೇಮಕ ಸಭೆಯಲ್ಲಿ ನರಸಿಂಹ ಮೂರ್ತಿ ಅವರಿಗೆ ನೇಮಕ ಪತ್ರ ನೀಡಿ ಅವರು ಮಾತನಾಡಿದರು.
ನಂತರ ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಮಾತನಾಡಿ, ನರಸಿಂಹ ಮೂರ್ತಿ ಅವರನ್ನು ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಶಿಫಾರಸ್ಸು ಮಾಡಲಾಗಿತ್ತು, ಅದರಂತೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಚಂದ್ರೇ ಗೌಡ ಅವರು ನರಸಿಂಹ ಮೂರ್ತಿ ಅವರಿಗೆ ಆದೇಶ ಪತ್ರ ನೀಡಿ ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದರು..
ಈ ವೇಳೆ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹರಿಶ್ ಚಕ್ರವರ್ತಿ, ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾ ಮೂರ್ತಿ, ರಂಗಸ್ವಾಮಿ, ಕರಾಟೆ ಶ್ರೀನಿವಾಸ್, ಮಂಜುನಾಥ್, ಕೆಎಸ್ ನರಸಿಂಹಮೂರ್ತಿ, ವೀರೇಶ್, ರಮೇಶ್ ಸೇರಿದಂತೆ ಇತರರು ಇದ್ದರು..
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…