ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಪ್ರಯಾಣಿಕರಿಂದ ಮನವಿ: ಚಿಕ್ಕಬಳ್ಳಾಪುರ ವಿಭಾಗದಿಂದ ದೊಡ್ಡಬಳ್ಳಾಪುರ ಬಸ್ ಘಟಕ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಮನವಿ: ಒಂದು ವಾರದ ಒಳಗಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವ

ತಾಲೂಕಿನಲ್ಲಿ ಹಲವು ತಿಂಗಳುಗಳಿಂದ ಸಾರಿಗೆ ಅವ್ಯವಸ್ಥೆ ಕಾಡುತ್ತಿದೆ. ಈ ಸಾರಿಗೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಇಂದು ಬಸ್ ಪ್ರಯಾಣಿಕರು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಪತ್ರ ನೀಡಿದರು.

ಇಂದು ಕೋರಮಂಗಲದ ಬಿಬಿಎಂಪಿ ಕಚೇರಿಯಲ್ಲಿ ರಾಮಲಿಂಗಾ ರೆಡ್ಡಿ ಅವರನ್ನು ಪ್ರಯಾಣಿಕರಾದ ವಿನೋದ್ ಕುಮಾರ್, ಮಂಜುನಾಥ್, ಚಂದ್ರ ಮಂಚನಬೆಲೆ, ಸಚಿನ್, ಮಂಜು ಆರ್ ಅವರು ಭೇಟಿಯಾಗಿ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಉಂಟಾಗಿರುವ ಸಾರಿಗೆ ಅವ್ಯವಸ್ಥೆ ಕುರಿತು ವಿವರಿಸಿದರು.

ದೊಡ್ಡಬಳ್ಳಾಪುರವು ಬೆಂಗಳೂರು ನಗರದಿಂದ ಸುಮಾರು 38 ಕಿ.ಮೀ. ಗಳ ದೂರದಲ್ಲಿದ್ದು, ದೊಡ್ಡಬಳ್ಳಾಪುರದ ನಾಗರಿಕರು ಬೆಂಗಳೂರಿಗೆ ಬಂದು ಹೋಗಲು ಸೂಕ್ತ ಸಾರಿಗೆ ವ್ಯವಸ್ಥೆ‌ ಇಲ್ಲದೆ ಪರದಾಡುವ ಪರಿಸ್ಥಿತಿ ತುಂಬಾ ವರ್ಷಗಳಿಂದಲೂ ಇದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.

ಯಾವುದೇ ಸರ್ಕಾರ ಮತ್ತು ಶಾಸಕರು ಬಂದರೂ ಸಹ ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲದ ಕಾರಣ ನಾವು ತಮ್ಮ ಮೇಲಿನ ನಂಬಿಕೆ ಹಾಗೂ ವಿಶ್ವಾಸದಿಂದ ಮನವಿಯನ್ನು ಸಲ್ಲಿಸುತ್ತಿದ್ದೇವೆ.

ಈ ಮೊದಲು ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ ಮತ್ತು ಇತರೆ ಕೆಲವು ಜಿಲ್ಲೆಗಳಿಗೆ ಹೋಗುತ್ತಿದ್ದ ಬಸ್ಸುಗಳನ್ನು ಈ ಹಿಂದೆ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮ್ಯಾನೇಜರ್ ರದ್ದು ಮಾಡಿರುತ್ತಾರೆ. ಹಾಗೂ ಈ ಹಿಂದೆ ಕಾವೇರಿ ಭವನ, ಬೆಂಗಳೂರು, ದೊಡ್ಡಬಳ್ಳಾಪುರ ನಡುವೆ ಸಂಚರಿಸಲು ಸುಮಾರು 15-20ರಷ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದರು. ಆದರೆ ಇದೀಗ ಅವುಗಳ ಸಂಖ್ಯೆ ಕೇವಲ 3-4ಕ್ಕೆ ಇಳಿದಿವೆ.

ಪ್ರತಿ ದಿನ ಸಾವಿರಾರು ಜನರು ಬೆಂಗಳೂರಿಗೆ ಬಂದು ಹೋಗುವವರಿದ್ದು, ಅವರುಗಳಲ್ಲಿ ಹೆಚ್ಚಾಗಿ ನ್ಯಾಯಾಲಯ, ಸರ್ಕಾರಿ ಕಚೇರಿ, ಶಾಲಾ- ಕಾಲೇಜುಗಳಿಗೆ, ಆಸ್ಪತ್ರಗಳಿಗೆ ಹಾಗೂ ಖಾಸಗಿ ಕಂಪನಿಗಳಿಗೆ ಹೋಗುವ ಉದ್ಯೋಗಿಗಳು, ವ್ಯಾಪಾರಸ್ಥರು, ಅವೆನ್ಯೂ ರೋಡ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರ ನಡೆಸುತ್ತಿರುವವರರಿದ್ದು, ಸದರಿಯವರುಗಳು ಸಮಯಕ್ಕೆ ಸರಿಯಾಗಿ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಹೋಗಲು ಹಾಗೂ ಬರಲು ತುಂಬಾ ಕಷ್ಟಕರವಾಗಿರುತ್ತದೆ.

ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗವಾಗಿ ಬಸ್ಸುಗಳ ಸಂಚಾರ ಇದ್ದು, ಆದರೆ, ಪ್ರಸ್ತುತ ಸಮಯಕ್ಕೆ ಸರಿಯಾಗಿ ಬಸ್ಸುಗಳು ಇಲ್ಲದೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ.

ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ.ಯ ಸಿಬ್ಬಂದಿಯನ್ನು ವಿಚಾರಿಸಲಾಗಿ, ಚಿಕ್ಕಬಳಾಪುರ ವಿಭಾಗಕ್ಕೆ ಸದರಿ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಅಲ್ಲಿಂದ ಸರಿಯಾಗಿ ಯಾವುದೇ ಬಸ್ಸುಗಳ ಸೇವೆ ಹಾಗೂ ಬಸ್ಸುಗಳಿಗೆ ಬೇಕಾಗುವ ಬಿಡಿ ಭಾಗಗಳು ಸರಿಯಾಗಿ ವಿತರಿಸದೇ ಇರುವುದೇ ಕಾರಣವೆಂದು ತಿಳಿಸಿರುತ್ತಾರೆ.

ಆದ್ದರಿಂದ, ಈ ಮೊದಲು ಬೆಂಗಳೂರಿನ ಕೇಂದ್ರ ವಿಭಾಗಕ್ಕೆ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಈಗ ಮತ್ತೆ ಚಿಕ್ಕಬಳ್ಳಾಪುರ ವಿಭಾಗದಿಂದ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಕೋರುತ್ತೇವೆ ಹಾಗೂ ಈಗಾಗಲೇ ರದ್ದುಪಡಿಸಿರುವ ಬಸ್ಸುಗಳ ರೂಟ್ (ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ) ಬಸ್ಸುಗಳನ್ನು ಹಾಗೂ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳ ಸೇವೆಯನ್ನು ದೊಡ್ಡಬಳ್ಳಾಪುರದಿಂದ ಕಾವೇರಿ ಭವನಕ್ಕೆ ಬೆಳಿಗ್ಗೆ 07-09 ಗಂಟೆಯವರೆಗೆ ಹಾಗೂ ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ಸಂಜೆ 6-8ಗಂಟೆಯವರೆಗೆ ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ತ್ವರಿತವಾಗಿ ಸ್ಪಂದಿಸಿ ಜಿಲ್ಲಾ ಸಾರಿಗೆ ವ್ಯವಸ್ಥಾಪಕರಿಗೆ ಕರೆಮಾಡಿ ಹೆಚ್ಚುವರಿ ಬಸ್ಸುಗಳನ್ನು ಒಂದು ವಾರದ ಒಳಗಾಗಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ‌.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

1 hour ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

4 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

5 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

16 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago