ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಪ್ರಯಾಣಿಕರಿಂದ ಮನವಿ: ಚಿಕ್ಕಬಳ್ಳಾಪುರ ವಿಭಾಗದಿಂದ ದೊಡ್ಡಬಳ್ಳಾಪುರ ಬಸ್ ಘಟಕ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಮನವಿ: ಒಂದು ವಾರದ ಒಳಗಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವ

ತಾಲೂಕಿನಲ್ಲಿ ಹಲವು ತಿಂಗಳುಗಳಿಂದ ಸಾರಿಗೆ ಅವ್ಯವಸ್ಥೆ ಕಾಡುತ್ತಿದೆ. ಈ ಸಾರಿಗೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಇಂದು ಬಸ್ ಪ್ರಯಾಣಿಕರು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಪತ್ರ ನೀಡಿದರು.

ಇಂದು ಕೋರಮಂಗಲದ ಬಿಬಿಎಂಪಿ ಕಚೇರಿಯಲ್ಲಿ ರಾಮಲಿಂಗಾ ರೆಡ್ಡಿ ಅವರನ್ನು ಪ್ರಯಾಣಿಕರಾದ ವಿನೋದ್ ಕುಮಾರ್, ಮಂಜುನಾಥ್, ಚಂದ್ರ ಮಂಚನಬೆಲೆ, ಸಚಿನ್, ಮಂಜು ಆರ್ ಅವರು ಭೇಟಿಯಾಗಿ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಉಂಟಾಗಿರುವ ಸಾರಿಗೆ ಅವ್ಯವಸ್ಥೆ ಕುರಿತು ವಿವರಿಸಿದರು.

ದೊಡ್ಡಬಳ್ಳಾಪುರವು ಬೆಂಗಳೂರು ನಗರದಿಂದ ಸುಮಾರು 38 ಕಿ.ಮೀ. ಗಳ ದೂರದಲ್ಲಿದ್ದು, ದೊಡ್ಡಬಳ್ಳಾಪುರದ ನಾಗರಿಕರು ಬೆಂಗಳೂರಿಗೆ ಬಂದು ಹೋಗಲು ಸೂಕ್ತ ಸಾರಿಗೆ ವ್ಯವಸ್ಥೆ‌ ಇಲ್ಲದೆ ಪರದಾಡುವ ಪರಿಸ್ಥಿತಿ ತುಂಬಾ ವರ್ಷಗಳಿಂದಲೂ ಇದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.

ಯಾವುದೇ ಸರ್ಕಾರ ಮತ್ತು ಶಾಸಕರು ಬಂದರೂ ಸಹ ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲದ ಕಾರಣ ನಾವು ತಮ್ಮ ಮೇಲಿನ ನಂಬಿಕೆ ಹಾಗೂ ವಿಶ್ವಾಸದಿಂದ ಮನವಿಯನ್ನು ಸಲ್ಲಿಸುತ್ತಿದ್ದೇವೆ.

ಈ ಮೊದಲು ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ ಮತ್ತು ಇತರೆ ಕೆಲವು ಜಿಲ್ಲೆಗಳಿಗೆ ಹೋಗುತ್ತಿದ್ದ ಬಸ್ಸುಗಳನ್ನು ಈ ಹಿಂದೆ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮ್ಯಾನೇಜರ್ ರದ್ದು ಮಾಡಿರುತ್ತಾರೆ. ಹಾಗೂ ಈ ಹಿಂದೆ ಕಾವೇರಿ ಭವನ, ಬೆಂಗಳೂರು, ದೊಡ್ಡಬಳ್ಳಾಪುರ ನಡುವೆ ಸಂಚರಿಸಲು ಸುಮಾರು 15-20ರಷ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದರು. ಆದರೆ ಇದೀಗ ಅವುಗಳ ಸಂಖ್ಯೆ ಕೇವಲ 3-4ಕ್ಕೆ ಇಳಿದಿವೆ.

ಪ್ರತಿ ದಿನ ಸಾವಿರಾರು ಜನರು ಬೆಂಗಳೂರಿಗೆ ಬಂದು ಹೋಗುವವರಿದ್ದು, ಅವರುಗಳಲ್ಲಿ ಹೆಚ್ಚಾಗಿ ನ್ಯಾಯಾಲಯ, ಸರ್ಕಾರಿ ಕಚೇರಿ, ಶಾಲಾ- ಕಾಲೇಜುಗಳಿಗೆ, ಆಸ್ಪತ್ರಗಳಿಗೆ ಹಾಗೂ ಖಾಸಗಿ ಕಂಪನಿಗಳಿಗೆ ಹೋಗುವ ಉದ್ಯೋಗಿಗಳು, ವ್ಯಾಪಾರಸ್ಥರು, ಅವೆನ್ಯೂ ರೋಡ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರ ನಡೆಸುತ್ತಿರುವವರರಿದ್ದು, ಸದರಿಯವರುಗಳು ಸಮಯಕ್ಕೆ ಸರಿಯಾಗಿ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಹೋಗಲು ಹಾಗೂ ಬರಲು ತುಂಬಾ ಕಷ್ಟಕರವಾಗಿರುತ್ತದೆ.

ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗವಾಗಿ ಬಸ್ಸುಗಳ ಸಂಚಾರ ಇದ್ದು, ಆದರೆ, ಪ್ರಸ್ತುತ ಸಮಯಕ್ಕೆ ಸರಿಯಾಗಿ ಬಸ್ಸುಗಳು ಇಲ್ಲದೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ.

ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ.ಯ ಸಿಬ್ಬಂದಿಯನ್ನು ವಿಚಾರಿಸಲಾಗಿ, ಚಿಕ್ಕಬಳಾಪುರ ವಿಭಾಗಕ್ಕೆ ಸದರಿ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಅಲ್ಲಿಂದ ಸರಿಯಾಗಿ ಯಾವುದೇ ಬಸ್ಸುಗಳ ಸೇವೆ ಹಾಗೂ ಬಸ್ಸುಗಳಿಗೆ ಬೇಕಾಗುವ ಬಿಡಿ ಭಾಗಗಳು ಸರಿಯಾಗಿ ವಿತರಿಸದೇ ಇರುವುದೇ ಕಾರಣವೆಂದು ತಿಳಿಸಿರುತ್ತಾರೆ.

ಆದ್ದರಿಂದ, ಈ ಮೊದಲು ಬೆಂಗಳೂರಿನ ಕೇಂದ್ರ ವಿಭಾಗಕ್ಕೆ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಈಗ ಮತ್ತೆ ಚಿಕ್ಕಬಳ್ಳಾಪುರ ವಿಭಾಗದಿಂದ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಕೋರುತ್ತೇವೆ ಹಾಗೂ ಈಗಾಗಲೇ ರದ್ದುಪಡಿಸಿರುವ ಬಸ್ಸುಗಳ ರೂಟ್ (ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ) ಬಸ್ಸುಗಳನ್ನು ಹಾಗೂ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳ ಸೇವೆಯನ್ನು ದೊಡ್ಡಬಳ್ಳಾಪುರದಿಂದ ಕಾವೇರಿ ಭವನಕ್ಕೆ ಬೆಳಿಗ್ಗೆ 07-09 ಗಂಟೆಯವರೆಗೆ ಹಾಗೂ ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ಸಂಜೆ 6-8ಗಂಟೆಯವರೆಗೆ ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ತ್ವರಿತವಾಗಿ ಸ್ಪಂದಿಸಿ ಜಿಲ್ಲಾ ಸಾರಿಗೆ ವ್ಯವಸ್ಥಾಪಕರಿಗೆ ಕರೆಮಾಡಿ ಹೆಚ್ಚುವರಿ ಬಸ್ಸುಗಳನ್ನು ಒಂದು ವಾರದ ಒಳಗಾಗಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ‌.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

2 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

15 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

22 hours ago