ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಪ್ರಯಾಣಿಕರಿಂದ ಮನವಿ: ಚಿಕ್ಕಬಳ್ಳಾಪುರ ವಿಭಾಗದಿಂದ ದೊಡ್ಡಬಳ್ಳಾಪುರ ಬಸ್ ಘಟಕ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಮನವಿ: ಒಂದು ವಾರದ ಒಳಗಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವ

ತಾಲೂಕಿನಲ್ಲಿ ಹಲವು ತಿಂಗಳುಗಳಿಂದ ಸಾರಿಗೆ ಅವ್ಯವಸ್ಥೆ ಕಾಡುತ್ತಿದೆ. ಈ ಸಾರಿಗೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಇಂದು ಬಸ್ ಪ್ರಯಾಣಿಕರು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಪತ್ರ ನೀಡಿದರು.

ಇಂದು ಕೋರಮಂಗಲದ ಬಿಬಿಎಂಪಿ ಕಚೇರಿಯಲ್ಲಿ ರಾಮಲಿಂಗಾ ರೆಡ್ಡಿ ಅವರನ್ನು ಪ್ರಯಾಣಿಕರಾದ ವಿನೋದ್ ಕುಮಾರ್, ಮಂಜುನಾಥ್, ಚಂದ್ರ ಮಂಚನಬೆಲೆ, ಸಚಿನ್, ಮಂಜು ಆರ್ ಅವರು ಭೇಟಿಯಾಗಿ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಉಂಟಾಗಿರುವ ಸಾರಿಗೆ ಅವ್ಯವಸ್ಥೆ ಕುರಿತು ವಿವರಿಸಿದರು.

ದೊಡ್ಡಬಳ್ಳಾಪುರವು ಬೆಂಗಳೂರು ನಗರದಿಂದ ಸುಮಾರು 38 ಕಿ.ಮೀ. ಗಳ ದೂರದಲ್ಲಿದ್ದು, ದೊಡ್ಡಬಳ್ಳಾಪುರದ ನಾಗರಿಕರು ಬೆಂಗಳೂರಿಗೆ ಬಂದು ಹೋಗಲು ಸೂಕ್ತ ಸಾರಿಗೆ ವ್ಯವಸ್ಥೆ‌ ಇಲ್ಲದೆ ಪರದಾಡುವ ಪರಿಸ್ಥಿತಿ ತುಂಬಾ ವರ್ಷಗಳಿಂದಲೂ ಇದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.

ಯಾವುದೇ ಸರ್ಕಾರ ಮತ್ತು ಶಾಸಕರು ಬಂದರೂ ಸಹ ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲದ ಕಾರಣ ನಾವು ತಮ್ಮ ಮೇಲಿನ ನಂಬಿಕೆ ಹಾಗೂ ವಿಶ್ವಾಸದಿಂದ ಮನವಿಯನ್ನು ಸಲ್ಲಿಸುತ್ತಿದ್ದೇವೆ.

ಈ ಮೊದಲು ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ ಮತ್ತು ಇತರೆ ಕೆಲವು ಜಿಲ್ಲೆಗಳಿಗೆ ಹೋಗುತ್ತಿದ್ದ ಬಸ್ಸುಗಳನ್ನು ಈ ಹಿಂದೆ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮ್ಯಾನೇಜರ್ ರದ್ದು ಮಾಡಿರುತ್ತಾರೆ. ಹಾಗೂ ಈ ಹಿಂದೆ ಕಾವೇರಿ ಭವನ, ಬೆಂಗಳೂರು, ದೊಡ್ಡಬಳ್ಳಾಪುರ ನಡುವೆ ಸಂಚರಿಸಲು ಸುಮಾರು 15-20ರಷ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದರು. ಆದರೆ ಇದೀಗ ಅವುಗಳ ಸಂಖ್ಯೆ ಕೇವಲ 3-4ಕ್ಕೆ ಇಳಿದಿವೆ.

ಪ್ರತಿ ದಿನ ಸಾವಿರಾರು ಜನರು ಬೆಂಗಳೂರಿಗೆ ಬಂದು ಹೋಗುವವರಿದ್ದು, ಅವರುಗಳಲ್ಲಿ ಹೆಚ್ಚಾಗಿ ನ್ಯಾಯಾಲಯ, ಸರ್ಕಾರಿ ಕಚೇರಿ, ಶಾಲಾ- ಕಾಲೇಜುಗಳಿಗೆ, ಆಸ್ಪತ್ರಗಳಿಗೆ ಹಾಗೂ ಖಾಸಗಿ ಕಂಪನಿಗಳಿಗೆ ಹೋಗುವ ಉದ್ಯೋಗಿಗಳು, ವ್ಯಾಪಾರಸ್ಥರು, ಅವೆನ್ಯೂ ರೋಡ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರ ನಡೆಸುತ್ತಿರುವವರರಿದ್ದು, ಸದರಿಯವರುಗಳು ಸಮಯಕ್ಕೆ ಸರಿಯಾಗಿ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಹೋಗಲು ಹಾಗೂ ಬರಲು ತುಂಬಾ ಕಷ್ಟಕರವಾಗಿರುತ್ತದೆ.

ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗವಾಗಿ ಬಸ್ಸುಗಳ ಸಂಚಾರ ಇದ್ದು, ಆದರೆ, ಪ್ರಸ್ತುತ ಸಮಯಕ್ಕೆ ಸರಿಯಾಗಿ ಬಸ್ಸುಗಳು ಇಲ್ಲದೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ.

ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ.ಯ ಸಿಬ್ಬಂದಿಯನ್ನು ವಿಚಾರಿಸಲಾಗಿ, ಚಿಕ್ಕಬಳಾಪುರ ವಿಭಾಗಕ್ಕೆ ಸದರಿ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಅಲ್ಲಿಂದ ಸರಿಯಾಗಿ ಯಾವುದೇ ಬಸ್ಸುಗಳ ಸೇವೆ ಹಾಗೂ ಬಸ್ಸುಗಳಿಗೆ ಬೇಕಾಗುವ ಬಿಡಿ ಭಾಗಗಳು ಸರಿಯಾಗಿ ವಿತರಿಸದೇ ಇರುವುದೇ ಕಾರಣವೆಂದು ತಿಳಿಸಿರುತ್ತಾರೆ.

ಆದ್ದರಿಂದ, ಈ ಮೊದಲು ಬೆಂಗಳೂರಿನ ಕೇಂದ್ರ ವಿಭಾಗಕ್ಕೆ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಈಗ ಮತ್ತೆ ಚಿಕ್ಕಬಳ್ಳಾಪುರ ವಿಭಾಗದಿಂದ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಕೋರುತ್ತೇವೆ ಹಾಗೂ ಈಗಾಗಲೇ ರದ್ದುಪಡಿಸಿರುವ ಬಸ್ಸುಗಳ ರೂಟ್ (ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ) ಬಸ್ಸುಗಳನ್ನು ಹಾಗೂ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳ ಸೇವೆಯನ್ನು ದೊಡ್ಡಬಳ್ಳಾಪುರದಿಂದ ಕಾವೇರಿ ಭವನಕ್ಕೆ ಬೆಳಿಗ್ಗೆ 07-09 ಗಂಟೆಯವರೆಗೆ ಹಾಗೂ ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ಸಂಜೆ 6-8ಗಂಟೆಯವರೆಗೆ ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ತ್ವರಿತವಾಗಿ ಸ್ಪಂದಿಸಿ ಜಿಲ್ಲಾ ಸಾರಿಗೆ ವ್ಯವಸ್ಥಾಪಕರಿಗೆ ಕರೆಮಾಡಿ ಹೆಚ್ಚುವರಿ ಬಸ್ಸುಗಳನ್ನು ಒಂದು ವಾರದ ಒಳಗಾಗಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ‌.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

33 minutes ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 hour ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

8 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

8 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

14 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago