ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಪ್ರಯಾಣಿಕರಿಂದ ಮನವಿ: ಚಿಕ್ಕಬಳ್ಳಾಪುರ ವಿಭಾಗದಿಂದ ದೊಡ್ಡಬಳ್ಳಾಪುರ ಬಸ್ ಘಟಕ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಮನವಿ: ಒಂದು ವಾರದ ಒಳಗಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವ

ತಾಲೂಕಿನಲ್ಲಿ ಹಲವು ತಿಂಗಳುಗಳಿಂದ ಸಾರಿಗೆ ಅವ್ಯವಸ್ಥೆ ಕಾಡುತ್ತಿದೆ. ಈ ಸಾರಿಗೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಇಂದು ಬಸ್ ಪ್ರಯಾಣಿಕರು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಪತ್ರ ನೀಡಿದರು.

ಇಂದು ಕೋರಮಂಗಲದ ಬಿಬಿಎಂಪಿ ಕಚೇರಿಯಲ್ಲಿ ರಾಮಲಿಂಗಾ ರೆಡ್ಡಿ ಅವರನ್ನು ಪ್ರಯಾಣಿಕರಾದ ವಿನೋದ್ ಕುಮಾರ್, ಮಂಜುನಾಥ್, ಚಂದ್ರ ಮಂಚನಬೆಲೆ, ಸಚಿನ್, ಮಂಜು ಆರ್ ಅವರು ಭೇಟಿಯಾಗಿ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಉಂಟಾಗಿರುವ ಸಾರಿಗೆ ಅವ್ಯವಸ್ಥೆ ಕುರಿತು ವಿವರಿಸಿದರು.

ದೊಡ್ಡಬಳ್ಳಾಪುರವು ಬೆಂಗಳೂರು ನಗರದಿಂದ ಸುಮಾರು 38 ಕಿ.ಮೀ. ಗಳ ದೂರದಲ್ಲಿದ್ದು, ದೊಡ್ಡಬಳ್ಳಾಪುರದ ನಾಗರಿಕರು ಬೆಂಗಳೂರಿಗೆ ಬಂದು ಹೋಗಲು ಸೂಕ್ತ ಸಾರಿಗೆ ವ್ಯವಸ್ಥೆ‌ ಇಲ್ಲದೆ ಪರದಾಡುವ ಪರಿಸ್ಥಿತಿ ತುಂಬಾ ವರ್ಷಗಳಿಂದಲೂ ಇದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.

ಯಾವುದೇ ಸರ್ಕಾರ ಮತ್ತು ಶಾಸಕರು ಬಂದರೂ ಸಹ ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲದ ಕಾರಣ ನಾವು ತಮ್ಮ ಮೇಲಿನ ನಂಬಿಕೆ ಹಾಗೂ ವಿಶ್ವಾಸದಿಂದ ಮನವಿಯನ್ನು ಸಲ್ಲಿಸುತ್ತಿದ್ದೇವೆ.

ಈ ಮೊದಲು ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ ಮತ್ತು ಇತರೆ ಕೆಲವು ಜಿಲ್ಲೆಗಳಿಗೆ ಹೋಗುತ್ತಿದ್ದ ಬಸ್ಸುಗಳನ್ನು ಈ ಹಿಂದೆ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮ್ಯಾನೇಜರ್ ರದ್ದು ಮಾಡಿರುತ್ತಾರೆ. ಹಾಗೂ ಈ ಹಿಂದೆ ಕಾವೇರಿ ಭವನ, ಬೆಂಗಳೂರು, ದೊಡ್ಡಬಳ್ಳಾಪುರ ನಡುವೆ ಸಂಚರಿಸಲು ಸುಮಾರು 15-20ರಷ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದರು. ಆದರೆ ಇದೀಗ ಅವುಗಳ ಸಂಖ್ಯೆ ಕೇವಲ 3-4ಕ್ಕೆ ಇಳಿದಿವೆ.

ಪ್ರತಿ ದಿನ ಸಾವಿರಾರು ಜನರು ಬೆಂಗಳೂರಿಗೆ ಬಂದು ಹೋಗುವವರಿದ್ದು, ಅವರುಗಳಲ್ಲಿ ಹೆಚ್ಚಾಗಿ ನ್ಯಾಯಾಲಯ, ಸರ್ಕಾರಿ ಕಚೇರಿ, ಶಾಲಾ- ಕಾಲೇಜುಗಳಿಗೆ, ಆಸ್ಪತ್ರಗಳಿಗೆ ಹಾಗೂ ಖಾಸಗಿ ಕಂಪನಿಗಳಿಗೆ ಹೋಗುವ ಉದ್ಯೋಗಿಗಳು, ವ್ಯಾಪಾರಸ್ಥರು, ಅವೆನ್ಯೂ ರೋಡ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರ ನಡೆಸುತ್ತಿರುವವರರಿದ್ದು, ಸದರಿಯವರುಗಳು ಸಮಯಕ್ಕೆ ಸರಿಯಾಗಿ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಹೋಗಲು ಹಾಗೂ ಬರಲು ತುಂಬಾ ಕಷ್ಟಕರವಾಗಿರುತ್ತದೆ.

ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗವಾಗಿ ಬಸ್ಸುಗಳ ಸಂಚಾರ ಇದ್ದು, ಆದರೆ, ಪ್ರಸ್ತುತ ಸಮಯಕ್ಕೆ ಸರಿಯಾಗಿ ಬಸ್ಸುಗಳು ಇಲ್ಲದೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ.

ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ.ಯ ಸಿಬ್ಬಂದಿಯನ್ನು ವಿಚಾರಿಸಲಾಗಿ, ಚಿಕ್ಕಬಳಾಪುರ ವಿಭಾಗಕ್ಕೆ ಸದರಿ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಅಲ್ಲಿಂದ ಸರಿಯಾಗಿ ಯಾವುದೇ ಬಸ್ಸುಗಳ ಸೇವೆ ಹಾಗೂ ಬಸ್ಸುಗಳಿಗೆ ಬೇಕಾಗುವ ಬಿಡಿ ಭಾಗಗಳು ಸರಿಯಾಗಿ ವಿತರಿಸದೇ ಇರುವುದೇ ಕಾರಣವೆಂದು ತಿಳಿಸಿರುತ್ತಾರೆ.

ಆದ್ದರಿಂದ, ಈ ಮೊದಲು ಬೆಂಗಳೂರಿನ ಕೇಂದ್ರ ವಿಭಾಗಕ್ಕೆ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಈಗ ಮತ್ತೆ ಚಿಕ್ಕಬಳ್ಳಾಪುರ ವಿಭಾಗದಿಂದ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಕೋರುತ್ತೇವೆ ಹಾಗೂ ಈಗಾಗಲೇ ರದ್ದುಪಡಿಸಿರುವ ಬಸ್ಸುಗಳ ರೂಟ್ (ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ) ಬಸ್ಸುಗಳನ್ನು ಹಾಗೂ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳ ಸೇವೆಯನ್ನು ದೊಡ್ಡಬಳ್ಳಾಪುರದಿಂದ ಕಾವೇರಿ ಭವನಕ್ಕೆ ಬೆಳಿಗ್ಗೆ 07-09 ಗಂಟೆಯವರೆಗೆ ಹಾಗೂ ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ಸಂಜೆ 6-8ಗಂಟೆಯವರೆಗೆ ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ತ್ವರಿತವಾಗಿ ಸ್ಪಂದಿಸಿ ಜಿಲ್ಲಾ ಸಾರಿಗೆ ವ್ಯವಸ್ಥಾಪಕರಿಗೆ ಕರೆಮಾಡಿ ಹೆಚ್ಚುವರಿ ಬಸ್ಸುಗಳನ್ನು ಒಂದು ವಾರದ ಒಳಗಾಗಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ‌.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

21 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago