ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಪ್ರಯಾಣಿಕರಿಂದ ಮನವಿ: ಚಿಕ್ಕಬಳ್ಳಾಪುರ ವಿಭಾಗದಿಂದ ದೊಡ್ಡಬಳ್ಳಾಪುರ ಬಸ್ ಘಟಕ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಮನವಿ: ಒಂದು ವಾರದ ಒಳಗಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವ

ತಾಲೂಕಿನಲ್ಲಿ ಹಲವು ತಿಂಗಳುಗಳಿಂದ ಸಾರಿಗೆ ಅವ್ಯವಸ್ಥೆ ಕಾಡುತ್ತಿದೆ. ಈ ಸಾರಿಗೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಇಂದು ಬಸ್ ಪ್ರಯಾಣಿಕರು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಪತ್ರ ನೀಡಿದರು.

ಇಂದು ಕೋರಮಂಗಲದ ಬಿಬಿಎಂಪಿ ಕಚೇರಿಯಲ್ಲಿ ರಾಮಲಿಂಗಾ ರೆಡ್ಡಿ ಅವರನ್ನು ಪ್ರಯಾಣಿಕರಾದ ವಿನೋದ್ ಕುಮಾರ್, ಮಂಜುನಾಥ್, ಚಂದ್ರ ಮಂಚನಬೆಲೆ, ಸಚಿನ್, ಮಂಜು ಆರ್ ಅವರು ಭೇಟಿಯಾಗಿ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಉಂಟಾಗಿರುವ ಸಾರಿಗೆ ಅವ್ಯವಸ್ಥೆ ಕುರಿತು ವಿವರಿಸಿದರು.

ದೊಡ್ಡಬಳ್ಳಾಪುರವು ಬೆಂಗಳೂರು ನಗರದಿಂದ ಸುಮಾರು 38 ಕಿ.ಮೀ. ಗಳ ದೂರದಲ್ಲಿದ್ದು, ದೊಡ್ಡಬಳ್ಳಾಪುರದ ನಾಗರಿಕರು ಬೆಂಗಳೂರಿಗೆ ಬಂದು ಹೋಗಲು ಸೂಕ್ತ ಸಾರಿಗೆ ವ್ಯವಸ್ಥೆ‌ ಇಲ್ಲದೆ ಪರದಾಡುವ ಪರಿಸ್ಥಿತಿ ತುಂಬಾ ವರ್ಷಗಳಿಂದಲೂ ಇದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.

ಯಾವುದೇ ಸರ್ಕಾರ ಮತ್ತು ಶಾಸಕರು ಬಂದರೂ ಸಹ ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲದ ಕಾರಣ ನಾವು ತಮ್ಮ ಮೇಲಿನ ನಂಬಿಕೆ ಹಾಗೂ ವಿಶ್ವಾಸದಿಂದ ಮನವಿಯನ್ನು ಸಲ್ಲಿಸುತ್ತಿದ್ದೇವೆ.

ಈ ಮೊದಲು ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ ಮತ್ತು ಇತರೆ ಕೆಲವು ಜಿಲ್ಲೆಗಳಿಗೆ ಹೋಗುತ್ತಿದ್ದ ಬಸ್ಸುಗಳನ್ನು ಈ ಹಿಂದೆ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮ್ಯಾನೇಜರ್ ರದ್ದು ಮಾಡಿರುತ್ತಾರೆ. ಹಾಗೂ ಈ ಹಿಂದೆ ಕಾವೇರಿ ಭವನ, ಬೆಂಗಳೂರು, ದೊಡ್ಡಬಳ್ಳಾಪುರ ನಡುವೆ ಸಂಚರಿಸಲು ಸುಮಾರು 15-20ರಷ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದರು. ಆದರೆ ಇದೀಗ ಅವುಗಳ ಸಂಖ್ಯೆ ಕೇವಲ 3-4ಕ್ಕೆ ಇಳಿದಿವೆ.

ಪ್ರತಿ ದಿನ ಸಾವಿರಾರು ಜನರು ಬೆಂಗಳೂರಿಗೆ ಬಂದು ಹೋಗುವವರಿದ್ದು, ಅವರುಗಳಲ್ಲಿ ಹೆಚ್ಚಾಗಿ ನ್ಯಾಯಾಲಯ, ಸರ್ಕಾರಿ ಕಚೇರಿ, ಶಾಲಾ- ಕಾಲೇಜುಗಳಿಗೆ, ಆಸ್ಪತ್ರಗಳಿಗೆ ಹಾಗೂ ಖಾಸಗಿ ಕಂಪನಿಗಳಿಗೆ ಹೋಗುವ ಉದ್ಯೋಗಿಗಳು, ವ್ಯಾಪಾರಸ್ಥರು, ಅವೆನ್ಯೂ ರೋಡ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರ ನಡೆಸುತ್ತಿರುವವರರಿದ್ದು, ಸದರಿಯವರುಗಳು ಸಮಯಕ್ಕೆ ಸರಿಯಾಗಿ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಹೋಗಲು ಹಾಗೂ ಬರಲು ತುಂಬಾ ಕಷ್ಟಕರವಾಗಿರುತ್ತದೆ.

ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗವಾಗಿ ಬಸ್ಸುಗಳ ಸಂಚಾರ ಇದ್ದು, ಆದರೆ, ಪ್ರಸ್ತುತ ಸಮಯಕ್ಕೆ ಸರಿಯಾಗಿ ಬಸ್ಸುಗಳು ಇಲ್ಲದೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ.

ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ.ಯ ಸಿಬ್ಬಂದಿಯನ್ನು ವಿಚಾರಿಸಲಾಗಿ, ಚಿಕ್ಕಬಳಾಪುರ ವಿಭಾಗಕ್ಕೆ ಸದರಿ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಅಲ್ಲಿಂದ ಸರಿಯಾಗಿ ಯಾವುದೇ ಬಸ್ಸುಗಳ ಸೇವೆ ಹಾಗೂ ಬಸ್ಸುಗಳಿಗೆ ಬೇಕಾಗುವ ಬಿಡಿ ಭಾಗಗಳು ಸರಿಯಾಗಿ ವಿತರಿಸದೇ ಇರುವುದೇ ಕಾರಣವೆಂದು ತಿಳಿಸಿರುತ್ತಾರೆ.

ಆದ್ದರಿಂದ, ಈ ಮೊದಲು ಬೆಂಗಳೂರಿನ ಕೇಂದ್ರ ವಿಭಾಗಕ್ಕೆ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಈಗ ಮತ್ತೆ ಚಿಕ್ಕಬಳ್ಳಾಪುರ ವಿಭಾಗದಿಂದ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಕೋರುತ್ತೇವೆ ಹಾಗೂ ಈಗಾಗಲೇ ರದ್ದುಪಡಿಸಿರುವ ಬಸ್ಸುಗಳ ರೂಟ್ (ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ) ಬಸ್ಸುಗಳನ್ನು ಹಾಗೂ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳ ಸೇವೆಯನ್ನು ದೊಡ್ಡಬಳ್ಳಾಪುರದಿಂದ ಕಾವೇರಿ ಭವನಕ್ಕೆ ಬೆಳಿಗ್ಗೆ 07-09 ಗಂಟೆಯವರೆಗೆ ಹಾಗೂ ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ಸಂಜೆ 6-8ಗಂಟೆಯವರೆಗೆ ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ತ್ವರಿತವಾಗಿ ಸ್ಪಂದಿಸಿ ಜಿಲ್ಲಾ ಸಾರಿಗೆ ವ್ಯವಸ್ಥಾಪಕರಿಗೆ ಕರೆಮಾಡಿ ಹೆಚ್ಚುವರಿ ಬಸ್ಸುಗಳನ್ನು ಒಂದು ವಾರದ ಒಳಗಾಗಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ‌.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

5 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

6 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

7 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

7 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

11 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

13 hours ago